ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಡಿವಾಳ‌ ಮಾಚಿದೇವರ ಜಯಂತಿ ಕಾರ್ಯಕ್ರಮ

ಮಹಾಪುರುಷರಾದ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು‌‌ಎಂದು ಶಾಸಕ‌ ಮಂಜುನಾಥ್ ತಿಳಿಸಿದರು.
ಹನೂರು:ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದ ಸಭಾಂಗಣದಲ್ಲಿ ಮಡಿವಾಳ‌ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು‌
ಆಯೋಜಿಸಲಾಗಿತ್ತು.ಈ ವೇಳೆ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ‌ ಬಳಿಕ ಮಾತನಾಡಿದ ಅವರು ಮಡಿವಾಳ ಮಾಚಿದೇವರು ಬದುಕಿನ ಸಾತ್ವಿಕತೆ ನೀಡಿ ಸತ್ಯ,ಶುದ್ಧ ಕಾಯಕ ಕೊಟ್ಟವರಾಗಿದ್ದಾರೆ.ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟಿದ್ದಾರೆ ಅಂತಹ ಮಹಾಪುರಷನ ಆದರ್ಶಗಳನ್ನು ಪ್ರತಿಯೊಬ್ಬರೂ‌ ಕೂಡಾ ಅಳವಡಿಸಿಕೊಳ್ಳಬೇಕು ಹಾಗೂ ಮೌಢ್ಯಗಳಿಂದ ದೀನರ ಶೋಷಣೆ ನಡೆಯುತ್ತಿದ್ದ ಕಾಲದಲ್ಲಿ ಮಾಚಿದೇವ ಜಾಗೃತಿಯ ಮೂಲಕ ಶೋಷಣೆ ತಡೆಗಟ್ಟಿದರು ಕಷ್ಟಗಳನ್ನು ಸಹಿಸಿಯೂ ಬಡ ಜನರ ಉದ್ಧಾರಕ್ಕೆ ಮಾರ್ಗದರ್ಶಕರಾಗಿದ್ದರು ಎಂದರು ಹಾಗಯೇ ಹನೂರು ಕ್ಷೇತ್ರದ ಮಡಿವಾಳ‌ ಸಮುದಾಯ ಏಳ್ಗೆಗೆ ಶ್ರಮಿಸುತ್ತೇನೆ ಶೀಘ್ರವೇ ಹನೂರು ಪಟ್ಟಣದಲ್ಲಿ‌ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಕೂಡಿಸಲು ಮುಂದಾಗುತ್ತೇನೆ ಎಂದು ಭರವಸೆ ನೀಡಿದರು.
ಬಳಿಕ ಮಡಿವಾಳ‌ ಸಮುದಾಯದ ತಾಲ್ಲೂಕು ಅದ್ಯಕ್ಷ ವಿಜಯ್ ಮಾತನಾಡಿ 2014ರಿಂದಲ್ಲೂ ನಮ್ಮ‌ ಮಡಿವಾಳ ಸಮುದಾಯವನ್ನು‌ ಪರಿಶಿಷ್ಟ ಜಾತಿಗೆ
ಸೇರಿಸುವಂತೆ ಒತ್ತಾಹಿಸುತ್ತಿದ್ದು ಆದರೆ ಇಂದಿಗೂ ಯಾವುದೇ ಪ್ರಯೋಜನವಾಗಿಲ್ಲ,
ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸುವಂತೆ ಹಾಗೂ ಹನೂರು ಪಟ್ಟಣದ ಕೇಂದ್ರ ಸ್ಥಾನದಲ್ಲಿ ಸಮುದಾಯ ಭವನಕ್ಕೆ,ಹಾಸ್ಟಲ್ ನಿರ್ಮಾಣಕ್ಕೆ ಮುಂದಾಗುವಂತೆ ಕೋರಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು,ಮಡಿವಾಳ ಮಾಚಿದೇವರ ಸಂಘದ , ಕಾರ್ಯದರ್ಶಿ ಕೃಷ್ಣ,ಮುಖಂಡರಾದ ಮೋಹನ್,‌ಪುಟ್ಟಣ್ಣ,ರಮೇಶಣ್ಣ,ನಂದೀಶ್, ಶಾಂತರಾಜು,ಮಾದೇಶ,ರಾಜಣ್ಣ.ಡಿ.ಆರ್.ಮಾದೇಶ, ಸುರೇಶ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ