ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಡಿವಾಳ ಮಾಚಿದೇವ ಜಯಂತಿಯ ಆಚರಣೆ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 12ನೇ ಶತಮಾನದ ಬಸವಣ್ಣನವರ ವಚನ ಸಂರಕ್ಷಕರಾದ ಮಡಿವಾಳ ಮಾಚಿದೇವ ಜಯಂತಿಯನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ನಂತರ ಶಾಲಾ ಶಿಕ್ಷಕರಾದ ಸೋಮರಾಜ ಮಾತನಾಡಿ 12ನೇ ಶತಮಾನದ ಮಡಿವಾಳ ಮಾಚಿದೇವರು ಬಸವಣ್ಣನವರ ತತ್ವವಾದಿಗಳಾಗಿದ್ದರು,
ಮೇಲು-ಕೀಳು ತಾರತಮ್ಯ,ಅಸೃಶ್ಯತೆ,ಮೂಢ ನಂಬಿಕೆಗಳ ಸೃಷ್ಟಿ,ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು.ಇವುಗಳೆಲ್ಲವುಗಳಿಂದ ಮಹಿಳೆಯರು,ವೃತ್ತಿ ನಿರತ ಶ್ರಮಜೀವಿಗಳು,ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು.ಸರ್ವರಿಗೂ ಸಮಪಾಲು -ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರ ಗಣ್ಯ ಬಳಗದಲ್ಲಿ ಮಡಿವಾಳ ಮಾಚಿದೇವ’ ಅತ್ಯಂತ ಪ್ರಕಾಶಮಾನವಾಗಿ ಕಂಡುಬರುವರು.
ವೀರನಿಷ್ಠೆಯ ಶರಣನೀತ ವಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನ ‘ದೇವರ ಹಿಪ್ಪರಗಿಯಲ್ಲಿ’ ಪರುವತಯ್ಯ -ಸುಜ್ನಾನವ್ವ ದಂಪತಿಗಳ ಪುತ್ರ ರತ್ನ -ಶರಣ ಕಿರಣ ಮಡಿವಾಳ ಮಾಚಿದೆವರು.ದೇವರ ಹಿಪ್ಪರಗಿ ಈತನ ಜನ್ಮಸ್ಥಳ.ಕಾರ್ಯಕ್ಷೇತ್ರ ಕಲ್ಯಾಣ ಆರಾಧ್ಯದೈವ ಕಲ್ಲಿನಾಥ.ಕಾವ್ಯ ಪುರಾಣಗಳಲ್ಲಿ ಈತನನ್ನು ವೀರಭದ್ರನ ಅವತಾರವೆಂದು ಬಣ್ಣಿಸಲಾಗಿದೆ.ಶಾಸನ ಶಿಲ್ಪಗಳಲ್ಲಿಯೂ ಇವನಿಗೆ ಎಡೆ ಲಭಿಸಿದೆ.ಶರಣರ ಬಟ್ಟೆಗಳನ್ನು ತೊಳೆಯುವುದು (ಶುಚಿ ಮಾಡುವುದು) ಈತನ ಕಾಯಕ.
ಮಡಿವಾಳ ಮಾಚಿದೇವರ ಬಗ್ಗೆ ಹಲವು ಐತಿಹ್ಯಗಳು ಪ್ರಚಾರದಲಿ ಇವೆ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ತಿಮ್ಮಣ್ಣ ಕನಕ ರೆಡ್ಡಿ,ಚತ್ರಪ್ಪ ನಾಯಕ,ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಲ್ಲಿಕಾರ್ಜುನಗೌಡ,ಎಸ್ ಡಿ ಎಂ ಸಿ ಸದಸ್ಯರಾದ,ಮಲ್ಲನಗೌಡ,ನಾಗೇಶ್ ಬೋವಿ, ಹನುಮೇಶ್ ಅಂಗಡಿ,ಲಕ್ಷ್ಮಣ ಹರಿಜನ,ಗ್ರಾಮ ಪಂಚಾಯತಿ ಸದಸ್ಯರಾದ ಅನಿಮೇಶ್ ತಳವಾರ್, ಶಾಲಾ ಮುಖ್ಯೋಪಾಧ್ಯಾಯರು ಶ್ರೀನಿವಾಶ, ಶಿಕ್ಷಕರಾದ ಸಂತೋಷ ಪಿ.ಡಿ,ಬಸವರಾಜ,ಹನುಮೇಶ, ಶಿಕ್ಷಕಿಯರು,ಗ್ರಾಮದ ಯುವಕರಾದ ವೆಂಕೋಬ ಬಿ, ನಿಂಗನಗೌಡ,ಪಂಪಾಪತಿ ಅಡಪದ್,ದುರ್ಗಮ್ಮ ದೇವಿ ಯುವಕ ಮಂಡಳಿಯವರು,ಗ್ರಾಮದ ಯುವಕರು, ಶಾಲಾ ವಿದ್ಯಾರ್ಥಿಗಳು ಕಾಲೇಜಿ ವಿದ್ಯಾರ್ಥಿಗಳು,ಶ್ರೀ ಬಸವ ಮಡಿವಾಳ ಮಾಚಿದೇವ ಸಮಾಜದವರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!