ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂವಿಧಾನ ಜಾಗೃತಿ ರಥ ಯಾತ್ರೆಗೆ ಅದ್ದೂರಿ ಸ್ವಾಗತ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಿಮಿತ್ತವಾಗಿ ಗ್ರಾಮಕ್ಕೆ ಆಗಮಿಸಿದ ರಥ
ಯಾತ್ರೆಗೆ ಅದ್ದೂರಿ ಸ್ವಾಗತವನ್ನು ಕೋರಿ ಅಂಬೇಡ್ಕರ್ ಪ್ರತಿಮೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳು ಮಾಲಾರ್ಪಣೆ,ಪುಷ್ಪಾರ್ಚನೆ ಮಾಡುವ ಮೂಲಕ ರಥವನ್ನು ಬರಮಾಡಿಕೊಂಡರು.
ಮಕ್ಕಳು ಸಂವಿಧಾನ ಪೀಠಿಕೆಯ ಘೋಷಣೆಗಳನ್ನು ಕೂಗುತ್ತಾ ಆ ಕಾರ್ಯಕ್ರಮಕ್ಕೆ ಮೆರಗು ನೀಡಿ ಕಳಸವನ್ನು ಹೊತ್ತು ಸಾಗಿದರು.
ಗ್ರಾಮಸ್ಥರು ಇದರಲ್ಲಿ ಪಾಲ್ಗೊಂಡು ಸಂವಿಧಾನದ ಬಗ್ಗೆ ರಥಯಾತ್ರೆಯಲ್ಲಿ ತೋರಿಸಿರುವ ಜಾಗೃತಿ ಚಿತ್ರಗಳನ್ನು ವೀಕ್ಷಣೆ ಮಾಡಿದರು ಮತ್ತು ಬಂದಂತಹ ಅಧಿಕಾರಿಗಳು ಸಂವಿಧಾನ ಘೋಷಣೆಗಳನ್ನು ನೆರೆದಿದ್ದ ಜನರಿಗೆ ಓದಿಸಿ ಅವರಿಗೂ ಸಹ ಹೇಳುವಂತೆ ಜಾಗೃತಿ ಮೂಡಿಸಿದರು.
ಈ ಕಾರ್ಯಕ್ರಮಕ್ಕೆ ಶ್ರೀ ಎ ಬಿ ಚಂದ್ರಶೇಖರ್ ರವರು ಸಹಾಯಕ ನಿರ್ದೇಶಕರು ಗ್ರೇಟ್2 ಪಿರಿಯಾಪಟ್ಟಣ ಗ್ರಾಮ ಲೆಕ್ಕಾಧಿಕಾರಿ ಪರಶುರಾಮ್ ರವರು,
ಪಂಚಾಯತಿ ಅಧ್ಯಕ್ಷರಾದ ಗೌರಮ್ಮನವರು, ಪಂಚಾಯತಿ ಅಭಿವೃದ್ಧಿ ಅಧ್ಯಕ್ಷರಾದ ಅನಿಲ್ ಕುಮಾರ್ ರವರು,ಕಾರ್ಯದರ್ಶಿಯವರಾದ ಗಣೇಶ್ ರವರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರಾದ ಕಾಂತಾಚಾರ್ ರವರು,ಪ್ರೌಢಶಾಲೆ ಮುಖ್ಯ ಶಿಕ್ಷಕಿಯಾದ ಲತಾ ರವರು,ಗ್ರಾಮ ಪಂಚಾಯತಿ ಎಲ್ಲಾ ಅಧಿಕಾರಿ ವೃಂದದವರು ಗ್ರಂಥಾಲಯ ಮೇಲ್ವಿಚಾರಕರು,ತಾಲೂಕು ಪಂಚಾಯಿತಿ ಅಧಿಕಾರಿ ವರ್ಗದವರು ಗ್ರಾಮಸ್ಥರು ಯುವಕರು ಹಾಜರಿದ್ದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ-ಹೆಚ್.ಆರ್.ಶಂಕರ್,ಹಂಡಿತವಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!