ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಳಪೆ ಕಾಮಗಾರಿಗೆ ಸಾಥ್ ಕೊಟ್ಟ ಅಧಿಕಾರಿಯ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ

ಇಂಡಿ:ತಾಲೂಕಿನ ಹಿರೇರೂಗಿ ಹಾಗೂ ತಾಂಬಾ ನಡುವೆ ಇರುವ ರಸ್ತೆ ದುರಸ್ಥಿ ಕಾಮಗಾರಿ ಮಾಡಿಸುತಿರುವ ಭ್ರಷ್ಟ ಗುತ್ತಿಗೆದಾರ ಹಾಗೂ ಇಂಡಿ ತಾಲೂಕಿನ. ಪಿ.ಡಬ್ಲ್ಯೂ.ಡಿ.ಇಲಾಖೆಯ. ಏ.ಇ.ಎಮ್. ಎಮ್. ಸಂಜವಾಡ ಹಾಗೂ ಇಲಾಖೆಯ ಮೇಲಾಧಿಕಾರಿಗಳ ಕುಮಕ್ಕಿನೊಂದಿಗೆ (ಎಸ್ಟಿಮೆಂಟ್) ಪ್ರಕಾರ ಕೆಲಸ ಮಾಡದೇ ಕಳಪೆ ಕಾಮಗಾರಿ ಮಾಡಿಸುತ್ತಿದ್ದು ಹಾಗೂ ಈ ಮೊದಲು ಸಾಕಷ್ಟು ಕಾಮಗಾರಿಗಳು ಕಳಪೆ ಮಟ್ಟದ ಕಾಮಗಾರಿಗಳು ಮಾಡಿಸಿದ್ದು ಇರುತ್ತದೆ, ಕೆಲಸಕ್ಕೆ ಬಂದ ಅನುದಾನದಲ್ಲಿ ಹಣ ಉಳಿಸಿಕೊಳ್ಳುವ ಚಾಳಿ ಬೆಳಿಸಿಕೊಂಡಿದ್ದಾರೆ ಹೀಗೆ ಸಾಕಷ್ಟು ಹಣ ಉಳಿಸಿಕೊಂಡು ತಮ್ಮ ಹಾಗೂ ಮನೆಯವರ ಹೆಸರಿಗೆ ಸಾಕಷ್ಟು ಅಕ್ರಮ ಆಸ್ತಿ ಮಾಡಿಕೊಂಡಿದ್ದಾರೆ ಎಂದು ಸಾರ್ವಜನಿಕರ ಮತ್ತು ಸಂಘಟನೆಗಳ ನೇರ ಆರೋಪವಾಗಿದೆ ಆದರಿಂದ ಇವರ ಮೇಲೆ ಮೇಲಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮಾನ್ಯ ಲೋಕಾಯುಕ್ತರು ಇವರ ಮೇಲೆ ನಿಗಾವಹಿಸಬೇಕು ಒಂದು ವೇಳೆ ಯಾವುದೇ ಕ್ರಮ ಕೈಗೊಳದೆ ಇದ್ದರೆ ಜಿಲ್ಲಾಧಿಕಾರಿ ಕಛೇರಿ ಮುಂದೆ ಹೋರಾಟ ಮಾಡಲಾಗುವದು ಎಂದು ರಿಪಬ್ಲಿಕನ್ ಪಾರ್ಟಿ ಆಪ್ ಇಂಡಿಯಾ (ಅಂ) ಘಟಕದ ತಾಲೂಕ ಅಧ್ಯಕ್ಷ ಚಂದ್ರಶೇಖರ ಮೇಲಿನಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ. ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ