ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಯಕ ಶರಣರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ:ಅಪರ ಜಿಲ್ಲಾಧಿಕಾರಿ ಡಾ.ಎನ್ ತಿಪ್ಪೇಸ್ವಾಮಿ

ಚಿಕ್ಕಬಳ್ಳಾಪುರ:ಜಿಲ್ಲಾಡಳಿತದಿಂದ ದಲಿತ ಕಾಯಕ ಶರಣರ ಜಯಂತಿ ಹಾಗೂ ಸವಿತಾ ಮಹರ್ಷಿ ಜಯಂತಿಯ ಕಾರ್ಯಕ್ರಮಗಳನ್ನು ಎಲ್ಲಾ ಸಮುದಾಯಗಳ ಭಾಗಿತ್ವದೊಂದಿಗೆ ಅರ್ಥ ಪೂರ್ಣವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅವರು ಅಧಿಕಾರಿಗಳಿಗೆ ತಿಳಿಸಿದರು.ಶುಕ್ರವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ವಿವಿಧ ಸಮುದಾಯಗಳ ಮುಖಂಡರುಗಳಿಂದ “ಕಾಯಕ ಶರಣರ ಜಯಂತಿ ಹಾಗೂ ಸವಿತಾ ಮಹರ್ಷಿ ಜಯಂತಿ”ಆಚರಣೆಗಳ ಕುರಿತು ಸಲಹೆಗಳನ್ನು ಆಲಿಸಿ  ಅವರು ಮಾತನಾಡಿದರು.
ಕಾಯಕ ಶರಣರ ಜಯಂತಿಯನ್ನು ಇದೇ ಫ್ರೆಬವರಿ 10 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಗುವುದು ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನಾನ್ಮ,ಶರಣರ ಕುರಿತು ಉಪನ್ಯಾಸ,ಪುಷ್ಪ ನಮನ,ಸಾಧಕ ವ್ಯಕ್ತಿಗಳಿಗೆ ಪುರಸ್ಕಾರ ಇರಲಿದೆ ಎಂದರು.
ಸವಿತಾ ಮಹರ್ಷಿ ಜಯಂತಿಯನ್ನು ಫ್ರೆಬವರಿ 27ರಂದು ಅಂಬೇಡ್ಕರ್ ಭವನದಲ್ಲಿ ನೆಡಸಲಾಗುವುದು ಅಂದು ಕಲಾತಂಡಗಳೊಂದಿಗೆ ಮೆರವಣಿಗೆಯು 9 ಘಂಟೆಗೆ ನಗರದ ಮರುಳುಸಿದ್ದೇಶ್ವರ ದೇವಾಲಯದಿಂದ ಆರಂಭವಾಗಿ ಅಂಬೇಡ್ಕರ್ ಭವನವರೆಗೂ ಜರುಗಲಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಉಪನ್ಯಾಸ,ಪುಷ್ಪ ನಮನ,ಸಾಧಕ ವ್ಯಕ್ತಿಗಳಿಗೆ ಪುರಸ್ಕಾರ ಸೇರಿದಂತೆ ಇತರ ಎಲ್ಲಾ ವ್ಯವಸ್ಥೆಗಳನ್ನು ಸುಸಜ್ಜಿತವಾಗಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಎನ್.ಮನಿಷಾ,ವಿವಿಧ ಸಮುದಾಯಗಳ ಮುಖಂಡರು,ಪದಾಧಿಕಾರಿಗಳು, ಸಾರ್ವಜನಿಕರು ಇದ್ದರು.

ವರದಿ-ತುಳಸಿನಾಯಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ