ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತರಾಟೆ ಮಾಡಿದರೆ ಕರಾಟೆ ಯೂಸ್ ಮಾಡಿ ಯಲಗೋಡ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಮಾಳಪ್ಪ ಪೂಜಾರಿ ಅವರಿಂದ ಮುಷ್ಟಿ ಪ್ರಯೋಗ ತರಬೇತಿ

ಯಡ್ರಾಮಿ ಸುದ್ದಿ:ಇತ್ತೀಚಿನ ದಿನಮಾನಗಳಲ್ಲಿ ಮಾನವೀಯ ಮೌಲ್ಯಗಳು ಮರೆಯಾಗಿ ಹೋಗುತ್ತಿವೆ ಹಾಗೂ ಹೆಣ್ಣು ಮಕ್ಕಳ ಮೇಲೆ ಅಮಾನವೀಯ ಅಸಭ್ಯ ವರ್ತನೆ ಹಾಗೂ ಲೈಂಗಿಕ ಶೋಷಣೆ ನಡೆಯುತ್ತಿರುವುದು ಖೇದಕರ ಸಂಗತಿ ಇದನ್ನು ತಡೆಗಟ್ಟುವ ಸಲುವಾಗಿ ಸರ್ಕಾರ ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಯ ಹಿತದೃಷ್ಟಿಯಿಂದ ರಾಜ್ಯದ ಪ್ರತಿಯೊಂದು ಪ್ರೌಢಶಾಲೆಯಲ್ಲಿ ಕರಾಟೆ ಸ್ವಯಂ ರಕ್ಷಣಾ ತರಬೇತಿ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಈ ಕಲೆಯನ್ನು ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಕಡ್ಡಾಯಗೊಳಿಸಬೇಕು ಎಂದು ಜೇವರ್ಗಿ ತಾಲೂಕ ಜನ್ನ ಶೀಟೋರಿಯೋ ಕರಾಟೆ ಅಸೋಸಿಯೇಷನ್ ತಾಲೂಕ ಅಧ್ಯಕ್ಷರಾದ ಜಟ್ಟಪ್ಪ ಎಸ್.ಪೂಜಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅದೇ ರೀತಿಯಾಗಿ ಕರಾಟೆ ಶಿಕ್ಷಕರಾದ ಸೇನಸೈ ಮಾಳಪ್ಪ ಎಸ್.ಪೂಜಾರಿ ಬಿಳವಾರ್ ಅವರು ಯಲಗೊಡ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದರು.ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಶ್ರೀ ಸಿದ್ದಪ್ಪ ಪೂಜಾರಿ,ಶ್ರೀ ಗುರುಶಾಂತಯ್ಯ ಚಿಕ್ಕಮಠ,ಶ್ರೀ ಶಾಂತ ಕುಮಾರ ಸಂಗಾಲಕ್,ಶ್ರೀಮತಿ ಬಸಲಿಂಗಮ್ಮ ದಾದಾಗೋಳ,ಶ್ರೀ ಭೀಮನಗೌಡ ಬಿರಾದರ್,ಶ್ರೀ ಶರಣು ಪೂಜಾರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ