ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ಹೆಚ್ ಸಿ ಮಹಾದೇವಪ್ಪ ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸದಂತೆ ಒತ್ತಾಯಿಸಿ ಪತ್ರಿಕಾ ಗೋಷ್ಠಿ

ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ವೀರೇಶ ವಕೀಲರು ಈಳಿಗನೂರು ಅವರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್ ಸಿ ಮಹಾದೇವಪ್ಪ ನವರು ಈಗಾಗಲೆ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ರೂಪಿಸಿ ನೀಡುವ ಮೂಲಕ ಇಡೀ ರಾಜ್ಯದ ಶೋಷಿತ ಸಮುದಾಯಗಳನ್ನು ಮುನ್ನೆಲೆಗೆ ತರುವ ಮತ್ತು ಅವುಗಳನ್ನು ಜಾರಿಗೆ ತಂದು ಕಾಂಗ್ರೇಸ್ ಪಕ್ಷಕ್ಕೆ ಬಹುದೊಡ್ಡ ಯಶಸ್ಸು ಮತ್ತು ಶಕ್ತಿಯನ್ನು ತಂದುಕೊಡುವಂಥಹ ಕೆಲಸ ಮಾಡಿದ್ದಾರೆ. ವಿಶೇಷವಾಗಿ ಇಂದು ದಲಿತ ಹಿಂದುಳಿದ ಸಮುದಾಯಗಳನ್ನು ರಾಜ್ಯಾದ್ಯಂತ ‌ಒಗ್ಗೂಡಿಸಿ ಅವರಿಗೆ ಅರಿವು,ಸಾಮಾಜಿಕ ನ್ಯಾಯ,ಶೋಷಿತ ಸಮುದಾಯಗಳ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿರುವ ಈ ದಿನಮಾನದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮತ್ತು ಕೇಂದ್ರ ಸಮಿತಿಗಳು ಇಂತಹ ಮನಸ್ಥಿತಿಯಿಂದ ಹೊರ ಬರಬೇಕು ಎಂದು ಈ ಮೂಲಕ ತಮ್ಮನ್ನು ಒತ್ತಾಯಿಸುತ್ತೇವೆ.
ಈಗಾಗಲೆ ಪಕ್ಷದ ಮೇಲೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡವ ಸಂದರ್ಭದಲ್ಲಿ ಅವರನ್ನು ಅದರಿಂದ ತಪ್ಪಿಸುವುದಕ್ಕಾಗಿಯೇ ಅವರನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಹೇಳಿ ಅವರನ್ನ ರಾಜ್ಯದಿಂದ ಹೊರದಬ್ಬಿದರು ಎನ್ನುವ ಆಪಾದನೆ ಮತ್ತು ಅದೇ ರೀತಿ ಡಾ.ಜಿ ಪರಮೇಶ್ವರ್ ಅವರು 2013ರ ಚುನಾವಣೆಯಲ್ಲಿ ಪಕ್ಷದ ಕೆಲವು ಹಿರಿಯರು ಅವರನ್ನು ಸೋಲಿಸಲು ಜೇಡರ ಬಲೆ ಹೆಣೆದು ಅವರನ್ನ ಸೋಲಿಸಿ ಮುಖ್ಯಮಂತ್ರಿ ಪದವಿಯಿಂದ ಅವರನ್ನ ಹಿಂದೆ ಸರಿಸಲು ವ್ಯವಸ್ಥಿತವಾಗಿ ಪಿತೂರಿ ನಡೆಸಿದರು ಎನ್ನುವ ಆಪಾದನೆಯೂ ಇದೆ.
ಇಂಥಹ ಹಲವಾರು ಆಪಾದನೆ ಇದ್ದಾಗಲೂ ಸಹ ಮತ್ತೋರ್ವ ಹಿರಿಯ ರಾಜಕೀಯ ಮುತ್ಸದ್ದಿ ಮತ್ತು ದಲಿತ,ಶೋಷಿತ ಸಮುದಾಯದಗಳ ಚಿಂತಕರಾದ ಡಾ.ಹೆಚ್ ಸಿ ಮಹಾದೇವಪ್ಪ ಅವರನ್ನೂ ಸಹ ಈ ರಾಜ್ಯ ಸರ್ಕಾರ ರಾಜ್ಯ ರಾಜಕಾರಣದಿಂದ ಹೊರದಬ್ಬುವ ಕೆಲಸ ಮಾಡುತ್ತಿದ್ದಾರೆ ಇಂತಹ ರಾಜಕೀಯ ಪಿತೂರಿಯನ್ನು ನಮ್ಮ ಸಂಘವು ತೀವ್ರವಾಗಿ ಖಂಡಿಸುತ್ತದೆ..!
ಒಂದು ವೇಳೆ ಸಚಿವ ಮಹಾದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರೇರೇಪಿಸಿದ್ದೇ ಆದರೆ ಕಾಂಗ್ರೆಸ್ ಪಕ್ಷವು ರಾಜ್ಯದ ಎಲ್ಲಾ 28 ಕ್ಷೇತ್ರದಲ್ಲಿ ದಲಿತ ಮತಗಳು ಅನಿವಾರ್ಯವಾಗಿ ಛಿದ್ರಗೊಂಡು ಪಕ್ಷಕ್ಕೆ ತುಂಬಾ ನಷ್ಟ ಅನುಭವಿಸುವ ಸಂಭಂವವಿದೆ ಮತ್ತು ಈ ಕುತಂತ್ರದ ವಿರುದ್ಧ ರಾಜ್ಯದ ಎಲ್ಲಾ ದಲಿತ ಸಮುದಾಯ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಲಿವೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ವೀರೇಶ ವಕೀಲರು ಈಳಿಗನೂರು ಕಾಂಗ್ರೆಸ್ ಯುವ ಮುಖಂಡರು ಕನಕಗಿರಿ ವಿಧಾನಸಭಾ ಕ್ಷೇತ್ರ,ವಿರುಪಣ್ಣ ಕುಂಟೋಜಿ,ಹನುಮಂತಪ್ಪ ಸೋಮನಾಳ, ಬಸವರಾಜ ಕಾರಟಗಿ,ಅಂಜಿನಪ್ಪ ಕಾರಟಗಿ,ಹುಲಿಗೆಪ್ಪ ಕಕ್ಕರಗೋಳ,ದೇವರಾಜ್ ಈಳಿಗನೂರು,ಹುಲಿರಾಜ್ ತೊಂಡಿಹಾಳ,ಬಸವರಾಜ್ ಬಸವಣ್ಣ ಕ್ಯಾಂಪ್,ಶಿವಪ್ಪ ಕಕ್ಕರಗೋಳ,ಉಪೇಂದ್ರ ವಕೀಲರು,ಮಾರುತಿ ಈಳಿಗನೂರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ