ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲಬುರಗಿಯ ಸ್ವಾಮಿನಾರಾಯಣ ಗುರುಕುಲ ವಿದ್ಯಾಸಂಸ್ಥೆಯಲ್ಲಿ ‘ಗುರುಕುಲ ಎಕ್ಸಪೋ’ ಕಾರ್ಯಕ್ರಮ

ಕಲಬುರಗಿ:ಇಲ್ಲಿನ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ವಿದ್ಯಾಸಂಸ್ಥೆ ಆವರಣದಲ್ಲಿ ನಿನ್ನೆ ಪ.ಪೂ.ಕೃಷ್ಣಚರಣದಾಸ ಸ್ವಾಮೀಜಿ,ಸತ್ಸಂಗ ಸ್ವಾಮೀಜಿ ಹಾಗೂ ಋಷಿಚರಂದಾಸ್ ಸ್ವಾಮೀಜಿ ರವರ ದಿವ್ಯ ಉಪಸ್ಥಿತಿಯಲ್ಲಿ ಗುರುಕುಲ ಗ್ರಾಂಡ್ ಎಕ್ಸಪೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಪರಮಪೂಜ್ಯ ನಯನ ಪ್ರಿಯದಾಸ ಸ್ವಾಮೀಜಿಯವರ ಮಾರ್ಗದರ್ಶನದ ಮೇರೆಗೆ ವಿದ್ಯಾರ್ಥಿಗಳು ಸೋಲಾರ್ ಸ್ಮಾರ್ಟ್ ಸಿಟಿ,ಟೆಲ್ಸಾ ಪ್ರಾಜೆಕ್ಟ್,ಗಣಿತದ ಮಾದರಿಗಳು,ಆಧುನಿಕ ತಂತ್ರಜ್ಞಾನ ಬಳಸಿ ವೈವಿಧ್ಯಮಯ ಪ್ರಾಜೆಕ್ಟ್ಗಳು ಇನ್ನೂ ಹಲವಾರು ಮಾದರಿಗಳು ರಚಿಸಿ ಅವುಗಳ ವಿಶ್ಲೇಷಣೆಗಳು ನೀಡಿದರು.ಈ ಮೇಳದ ಉದ್ಘಾಟನೆಯನ್ನು ಕಲಬುರಗಿ ಜಿಲ್ಲೆಯ ವಿಜ್ಞಾನಿಗಳು ಹಾಗೂ ಪ್ರಾಧ್ಯಾಪಕರಾದ ಶ್ರೀಯುತ ಎಂ.ಎಸ್ ಜುಗದ್ ಅವರು ಮಾಡಿದರುನಂತರ ಎಲ್ಲಾ ಪ್ರೋಜೆಕ್ಟ್’ಗಳನ್ನು ವೀಕ್ಷಿಸಿ ವಿದ್ಯಾರ್ಥಿಗಳ ಉತ್ತಮ ಚಟುವಟಿಕೆಯನ್ನು ಕಂಡು ಹರ್ಷ ವ್ಯಕ್ತಪಡಿಸಿದರು. ಈ ಮೇಳದಲ್ಲಿ ಶಾಲೆಯ ಪಾಲಕರು ಪೋಷಕರು ಭಾಗವಹಿಸಿ ಮಕ್ಕಳ ಕಲಿಕಾ ಶೈಲಿಗೆ,ಶಿಕ್ಷಕರ ಮಾರ್ಗದರ್ಶನಕ್ಕೆ ಹಾಗೂ ಶಿಕ್ಷಣ ಸಂಸ್ಥೆ ಹಮ್ಮಿಕೊಂಡ ಈ ಕಾರ್ಯಕ್ರಮಕ್ಕೆ ಹಾಗೂ ಕಾರ್ಯಕ್ಕೆ ಪ್ರಶಂಶಿಸಿದ್ದಾರೆ.ಈ ಮೇಳ ಯಶಸ್ವಿಯಾಗಿದ್ದಕ್ಕೆ ಶಾಲೆಯ ಪೂಜ್ಯರು ಆಡಳಿತ ಮಂಡಳಿಯವರು ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

ವರದಿ-ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ