ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾಸಾಶನ ಪಡೆಯಲು ವಿಶೇಷ ಚೇತನ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

ಬಲೆಗೆ

ನ್ಯಾಮತಿ ನಾಡಕಛೇರಿಯ ಆಡಳಿತಾಧಿಕಾರಿ ಗಣೇಶ್ ಟ್ಯಾಪ್ ಆದ ವ್ಯಕ್ತಿ.ಈತ 6,000 ಲಂಚಕ್ಕೆ ಬೇಡಿಕೆ ಇಟ್ಟು 5,000 ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ನ್ಯಾಮತಿ ತಾಲೂಕಿನ ಕುಂಕುವ ಗ್ರಾಮದ ವೀರೇಶ್ ಎಂಬಾತ ತನ್ನ ತಮ್ಮ ವಿಶೇಷಚೇತನ ಹರ್ಷನಿಗೆ ವಿಶೇಷ ಚೇತನ ಮಾಸಾಶನ ಪಡೆಯಲು ಫೆ.9 ಕ್ಕೆ ನ್ಯಾಮತಿ ನಾಡಕಛೇರಿಗೆ ಅರ್ಜಿ ಸಲ್ಲಿಸಿದ್ದರು ಬಳಿಕ ಸದರಿ ಅರ್ಜಿಯನ್ನು ಆರೋಪಿ ಕೆ.ಜಿ.ಗಣೇಶ್
ತನ್ನ ಲಾಗಿನ್ ನಿಂದ ಮೂವ್ ಮಾಡಲು ರೂ. 6,000/-ಲಂಚದ ಹಣಕ್ಕೆ ಬೇಡಿಕೆ ಇಟ್ಟು ಅಂತಿಮವಾಗಿ ರೂ. 5000/- ಗಳಿಗೆ ಒಪ್ಪಿ ಹಣ ಹೊಂದಿಸಿಕೊಂಡು ಬರಲು ತಿಳಿಸಿದ್ದ ನಂತರ ಶ್ರೀ ಗಣೇಶ್ ಅಂಗವಿಕಲ ಮಾಸಾಶನದ ಅರ್ಜಿಯನ್ನು ಶಿಫಾರಸ್ಸು ಮಾಡಲು ಲಂಚದ ಹಣ ಬೇಡಿಕೆ ಇಟ್ಟಿದ್ದಾನೆ ಎಂದು ಲೋಕಾಯುಕ್ತಗೆ ದೂರು ಸಲ್ಲಿಸಲಾಗಿತ್ತು ಈ ದೂರಿನ ಮೇರೆಗೆ ದಾವಣಗೆರೆ ಲೋಕಾಯುಕ್ತ ಆರೋಪಿ ಗಣೇಶ್ ಬಸವನಹಳ್ಳಿ ಗ್ರಾಮದ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ 5000/- ರೂ.ಲಂಚದ ಹಣವನ್ನು ಪಡೆಯುವಾಗ ಟ್ರ್ಯಾಪ್ ಆಗಿದ್ದಾರೆ‌.ಈ ಕಾರ್ಯಾಚರಣೆಯಲ್ಲಿ ಎಸ್ ಪಿ ಎಂ.ಎಸ್.ಕೌಲಾಪೂರೆ ಮಾರ್ಗದರ್ಶನ ನೀಡಿದ್ದು, ಪೊಲೀಸ್ ಉಪಾಧೀಕ್ಷಕಿ ಕೆ.ಕಲಾವತಿ,ಪೊಲೀಸ್ ನಿರೀಕ್ಷಕ ಹೆಚ್.ಎಸ್.ರಾಷ್ಟ್ರಪತಿ ಶ್ರೀ ಮಧುಸೂದನ್ ಸಿ ಹಾಗೂ ಸಿಬ್ಬಂದಿಗಳಾದ ಶ್ರೀ ವೀರೇಶಯ್ಯ,ಸುಂದರೇಶ,ಸುರೇಶ್,ಮಲ್ಲಿಕಾರ್ಜುನ, ಧನರಾಜ್,ಮಂಜುನಾಥ,ಗಿರೀಶ,ಲಿಂಗೇಶ, ಬಸವರಾಜ್,ಕೋಟಿನಾಯ್ಕ ಭಾಗಿಯಾಗಿದ್ದರು.

ವರದಿ-ಪ್ರಭಾಕರ ಡಿ ಎಂ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ