ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಸಕ‌ ಅಲ್ಲಮಪ್ರಭು ಪಾಟೀಲ ವಿರುದ್ಧ ಸುಳ್ಳು ಆರೋಪ

ಕಲಬುರಗಿ:ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ವಿರುದ್ಧ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಮಾಡುತ್ತಿರುವ ಆರೋಪಗಳು ಶುದ್ಧ ಸುಳ್ಳು ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಓಂಕಾರ ವಠಾರ ಹೇಳಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ರಾಜಕೀಯ ಲಾಭಕ್ಕಾಗಿ ಲೋಕಸಭಾ ಚುನಾವಣಾ ಸಮೀಪಸುತ್ತಿದ್ದಂತೆ ಇಂತಹ ಹೇಳಿಕೆ ನೀಡುತ್ತಿದ್ದಾರೆ.
ಈಗಾಗಲೇ ಜನರ ಆರ್ಶೀವಾದದಿಂದ ಶಾಸಕರಾಗಿ ಆಯ್ಕೆಯಾಗಿರುವ ಅಲ್ಲಮಪ್ರಭು ಪಾಟೀಲ ಅವರು ದಕ್ಷಿಣ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯ ಮಾಡುತ್ತಿದ್ದಾರೆ.ಅಭಿವೃದ್ಧಿಯನ್ನು ಸಹಿಸಿಕೊಳ್ಳಲು ಸಾಧ್ಯವಾಗದೆ ಬಿಜೆಪಿ ನಾಯಕರು ಇಂತಹ ಹೇಳಿಕೆಗಳನ್ನು ನೀಡಿ ಶಾಸಕರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಜನರ ನಿರೀಕ್ಷೆಯಂತೆ ಉತ್ತಮ ಕಾರ್ಯಗಳನ್ನು ಮಾಡುವಲ್ಲಿ ವಿಫಲರಾಗಿ ಅಧಿಕಾರ ಕಳೆದುಕೊಂಡು ಕಂಗಾಲಾಗಿ ಬೇರೆಯವರೆ ಮೇಲೆ ಆರೋಪಗಳನ್ನು ಮಾಡುವುದೇ ಇವರ ದಿನಿತ್ಯದ ಕಾಯಕವಾಗಿದೆ. ಇದನ್ನೆಲ್ಲ ಬಿಟ್ಟು ಜನರ ಕಲ್ಯಾಣಕ್ಕಾಗಿ ಶ್ರಮ ವಹಿಸುವುದು ಒಳಿತು ಎಂದು ಸಲಹೆ ನೀಡಿದರು.
ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆದ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ಶಾಸಕರ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದು ಆರೋಗ್ಯಕರ ಬೆಳವಣಿಗೆ ಅಲ್ಲ ಯಾವುದೇ ಒಂದು ಆರೋಪ ಮಾಡಬೇಕಂದರೆ ಇದರ ಹಿಂದೆ ಸತ್ಯಾಂಶವಿರಬೇಕು ಎಂದು ಅವರು ಹೇಳಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ