ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

25 ಮಹಿಳಾ ಜ್ಞಾನವಿಕಾಸ ಕೇಂದ್ರಗಳ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲ್ಲೂಕು ಕೊಟ್ಟೂರು ಯೋಜನಾ ವ್ಯಾಪ್ತಿಯಲ್ಲಿ 25 ಮಹಿಳಾ ಜ್ಞಾನವಿಕಾಸ ಕೇಂದ್ರಗಳ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕೊಟ್ಟೂರು ಆರಕ್ಷಕ ಸರ್ಕಲ್ ಇನ್ಸ್ಪೆಕ್ಟರ್ ವೆಂಕಟಸ್ವಾಮಿ ಟಿ ಅವರು ನೆರವೇರಿಸಿ ಯಾವುದೇ ಸರ್ಕಾರ ಮಾಡದಿರುವ ಕೆಲಸವನ್ನು ಇಂದು ಧರ್ಮಸ್ಥಳ ಯೋಜನೆಯು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಈ ಕಾರ್ಯಗಳಲ್ಲಿ ಭಾಗಿಯಾಗುವುದು ಪುಣ್ಯವೇ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಎಚ್ ಕೆ ಡಿಸೋಜಾ ಅಧ್ಯಕ್ಷರು ದುರ್ಗಾಂಬಿಕ ಜ್ಞಾನ ವಿಕಾಸ ಕೇಂದ್ರ ರಾಜೀವ ನಗರ ಮುಖ್ಯ ಅತಿಥಿಗಳಾಗಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಗಣೇಶ್ ಬಿ ಅವರು ವಹಿಸಿದ್ದರು.ಇವರು ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ರಂಗಗಳಲ್ಲಿಯೂ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ ಜೊತೆಗೆ ಕುಟುಂಬವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುತ್ತಿದ್ದಾರೆ ಅಲ್ಲದೆ ಉಳಿತಾಯ,ಶಿಕ್ಷಣ ಆರ್ಥಿಕ ನಿರ್ವಹಣೆ ಮತ್ತು ಸ್ವಚ್ಛತೆ ಶಿಸ್ತು ಕೌಟುಂಬಿಕ ಜೀವನದಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರದ ಜ್ಞಾನವನ್ನು ನೀಡುವ ಕಾರ್ಯಕ್ರಮವೇ ಜ್ಞಾನ ವಿಕಾಸ ಕಾರ್ಯಕ್ರಮ ಎಂದು ಹೇಳಿದರು.ಇನ್ನೋರ್ವ ಮುಖ್ಯ ಅತಿಥಿಗಳಾದ ಶ್ರೀ ಅಮರೇಶ್ ಜಿ ಕೆ (ಕೆ ಎ ಎಸ್) ಅವರು ಮಾತನಾಡಿ ಧರ್ಮಸ್ಥಳ ಸಂಸ್ಥೆಯು ಮಾಡುತ್ತಿರುವ ಕೆಲಸಗಳು ಶ್ಲಾಘನೀಯವಾಗಿವೆ ಎಲ್ಲಾ ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಹಾಗೂ ಎಲ್ಲಾ ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಹೇಳಿದರು ಮುಖ್ಯ ಅತಿಥಿಗಳಾಗಿ ವಿಜಯನಗರ ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಶ್ರೀ ಸತೀಶ್ ಶೆಟ್ಟಿ ಜನಜಾಗೃತಿ ವೇದಿಕೆ ಸದಸ್ಯರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಎಚ್ ವಿಶ್ವೇಶ್ವರ ಸಜ್ಜನ್ ಹಾಗೂ ಶ್ರೀಮತಿ ಡಾಕ್ಟರ್ ಕುಸುಮ ಸಜ್ಜನ್ ಅವರು ಉಪಸ್ಥಿತರಿದ್ದು ಎಚ್ ವಿಶ್ವೇಶ್ವರ ಸಜ್ಜನ್ ಅವರು ನಿತ್ಯ ಆಹಾರದಲ್ಲಿ ಸಿರಿಧಾನ್ಯಗಳನ್ನು ಬಳಸುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು. ಶ್ರೀಮತಿ ಡಾಕ್ಟರ್ ಕುಸುಮಾ ಸಜ್ಜನ್ ಅವರು ಕುಟುಂಬದ ಆರ್ಥಿಕ ನಿರ್ವಹಣೆಯಲ್ಲಿ ಮಹಿಳೆಯ ಪಾತ್ರ ಬಹುಮುಖ್ಯವಾಗಿದ್ದು ತಮ್ಮ ಪಾತ್ರ ಕನುಗುಣವಾಗಿ ಎಲ್ಲಾ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಹೋಗುತ್ತಾಳೆ ಎಂದು ಹೇಳಿದರು.ಉಳಿದಂತೆ ಕಾರ್ಯಕ್ರಮದಲ್ಲಿ ಕೊಟ್ಟೂರು ತಾಲೂಕಿನ ಯೋಜನಾಧಿಕಾರಿಗಳು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮೇಲ್ವಿಚಾರಕ ಹಂತದ ಸಿಬ್ಬಂದಿಗಳು ಕಚೇರಿ ಸಿಬ್ಬಂದಿಗಳು ಹಾಗೂ csc ಸೇವಾದಾರರು,ಸೇವಾಪ್ರತಿನಿಧಿಗಳು ಮತ್ತು 25 ಜ್ಞಾನ ವಿಕಾಸ ಕೇಂದ್ರಗಳ ಆಯ್ದ 500 ಸದಸ್ಯರು ಉಪಸ್ಥಿತರಿದ್ದರು.ಕಾರ್ಯಕ್ರಮದ ವಿಶೇಷತೆ ವಿವಿಧ ಸ್ಟಾಲ್ಗಳು ಹಾಗೂ ಕೇಂದ್ರದ ಸದಸ್ಯರಿಂದ ಸಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 5 ಜನ ಮಹಿಳೆಯರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡಲಾಯಿತು.ಜೊತೆಗೆ ವಿವಿಧ ಅನುದಾನಗಳ ಮಂಜೂರಾತಿ ಪತ್ರ ಮತ್ತು ವಿವಿಧ ಸೌಲಭ್ಯಗಳ ಸಾಂಕೇತಿಕ ವಿತರಣೆ ಮಾಡಲಾಯಿತು.

ವರದಿ.ವೈ.ಮಹೇಶ್ ಕುಮಾರ್ ಕೊಟ್ಟೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ