ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೊಪ್ಪಳ:ಹಾಲವರ್ತಿಯ ಅಸೃಶ್ಯತೆಗೆ ಕೊನೆ ಎಂದು?

ಕೊಪ್ಪಳ:ಜಿಲ್ಲಾ ಕೇಂದ್ರದಿಂದ ಕೇವಲ ಐದಾರು ಕಿ.ಮೀ.ದೂರದಲ್ಲಿರುವ ಕೊಪ್ಪಳ ತಾಲ್ಲೂಕಿನ ಹಾಲವರ್ತಿ ಗ್ರಾಮದಲ್ಲಿ ದಲಿತರು ಹೋಟೆಲ್ ಪ್ರವೇಶಿಸಿದರೆ ಹೋಟೆಲ್ ಬಂದ್ ಮಾಡಲಾಗುತ್ತದೆ. ಕ್ಷೌರದ ಅಂಗಡಿಗಳಲ್ಲಿ ಅಸ್ಪೃಶ್ಯತೆ ತಾಂಡವಾಡುತ್ತಿದೆ.
ಗ್ರಾಮದಲ್ಲಿ ಹಲವು ದಿನಗಳಿಂದ ಹೀಗೆ ನಡೆದುಕೊಂಡು ಬರುತ್ತಿರುವುದನ್ನು ಕಂಡು ದಲಿತ ಸಮುದಾಯದ ವಿದ್ಯಾವಂತ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹೋಟೆಲ್ ಹಾಗೂ ಕ್ಷೌರದ ಅಂಗಡಿಗಳ ಮಾಲೀಕರನ್ನು ತರಾಟೆಗೆ ತೆಗೆದುಕೊಂಡು 14-2-2024 ರಂದು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ದಲಿತರು ಹೋಟೆಲ್‌ಗೆ ಬಂದರೆ ತಿಂದು ಬಿಸಾಡುವ ಪ್ಲೇಟ್‌ನಲ್ಲಿ ಬೇರೆಯವರಿಗೆ ಸ್ಟೀಲ್ ಪ್ಲೇಟ್‌ನಲ್ಲಿ ಆಹಾರ ಕೊಡಲಾಗುತ್ತದೆ.ಕ್ಷೌರಿಕರ ಅಂಗಡಿಗೆ ತೆರಳಿದರೆ ಕ್ಷೌರ ಮಾಡುವುದಿಲ್ಲ ಪ್ರಶ್ನಿಸಿದರೆ ಬೀಗ ಹಾಕಿಕೊಂಡು ಹೋಗಿಬಿಡುತ್ತಾರೆ ಎಂದು ದಲಿತ ಸಮುದಾಯದ ಯುವಕರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದಲ್ಲಿ ಕೆರೆಯಿದ್ದು ಅಲ್ಲಿನ ನೀರು ದಲಿತರು ಮುಟ್ಟಬಾರದು ಎಂದು ಕೆರೆಗೆ ಕಾವಲುಗಾರನನ್ನು ನಿಯೋಜಿಸಿದ್ದಾರೆ.ಇದನ್ನು ಪ್ರಶ್ನಿಸಿದರೆ ಕೆರೆಯ ನೀರು ಕೊಳಚೆಯಾಗಬಾರದೆಂದು ಹೀಗೆ ಮಾಡಿದ್ದೇವೆಂದು ಸಬೂಬು ಹೇಳುತ್ತಾರೆ ಯುವಕರ ತಂಡದವರು ಆಪಾದಿಸಿದ್ದಾರೆ.

ವರದಿ:ಮಲ್ಲಿಕ್ ಕೊಪ್ಪಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ