ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಸ್ಪೃಶ್ಯತೆ ಆಚರಣೆ ಯಾವುದೇ ಕಾರಣಕ್ಕೂ ನಡೆಯಬಾರದು:ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ

ಕೊಪ್ಪಳ:ಅಸ್ಪೃಶ್ಯತೆ ಆಚರಣೆ ಯಾವುದೇ ಕಾರಣಕ್ಕೂ ನಡೆಯಬಾರದು ಸಮಾಜ ಒಪ್ಪದ ಕೆಲಸವನ್ನು ಯಾರೂ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮನವಿ ಮಾಡಿದರು.

ಕೊಪ್ಪಳ ತಾಲ್ಲೂಕಿನ ಹಾಲವರ್ತಿ ಗ್ರಾಮದಲ್ಲಿ ಇತ್ತೀಚೆಗೆ ದಲಿತರಿಗೆ ಹೋಟೆಲ್‌ಗಳಲ್ಲಿ ಪ್ರವೇಶ ನೀಡುತ್ತಿಲ್ಲ.ಕ್ಷೌರ ಮಾಡದೆ ತಾರತಮ್ಯ ಮಾಡಲಾಗುತ್ತಿದೆ ಎಂಬ ಘಟನೆ ಕುರಿತು ವರದಿಯಾಗಿತ್ತು.ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿದ ಶಿವರಾಜ್ ತಂಗಡಗಿ ಎಲ್ಲರೊಂದಿಗೂ ಮಾತನಾಡಿ ಶಾಂತಿ ಹಾಗೂ ಸಹಭಾಳ್ವೆಯಿಂದ ಬದುಕಬೇಕು ಎಂದು ಹೇಳಿ ಸಂತ್ರಸ್ತ ಯುವಕನಿಗೆ ₹25 ಸಾವಿರ ಚೆಕ್‌ ವಿತರಿಸಿದರು.
‘ಯಾರೂ ತಾರತಮ್ಯ ಮಾಡಬಾರದು ಅಮಾಯಕರ ಮೇಲೆ ದಾಳಿ ಮಾಡಿದರೆ ಅಂತಹದ್ದನ್ನು ಸಹಿಸಲಾಗದು ಆದಾಗ್ಯೂ ಮತ್ತೆ ತಪ್ಪುಗಳು ನಡೆದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು. ಜನರನ್ನು ಒಡೆದಾಳುವ ಅಮಾನವೀಯ ತಂತ್ರಗಳಿಗೆ ಯಾರೂ ಬಲಿಪಶುಗಳಾಗಬಾರದು ತಾರತಮ್ಯ ಮಾಡುವುದಕ್ಕೆ ಸರ್ಕಾರ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.

ಅವಮಾನದ ಸಂಗತಿ:ಮುಖಂಡ ಡಿ.ಎಚ್.ಪೂಜಾರ ಮಾತನಾಡಿ ‘ಹಾಲವರ್ತಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ನಡೆದಿರುವುದು ಈ ದೇಶಕ್ಕೆ ಅವಮಾನದ ಸಂಗತಿಯಾಗಿದೆ.ದೂರು ಕೊಟ್ಟಿದ್ದಕ್ಕೆ ಮೇಲ್ಜಾತಿಯ ಜನರು ನಮಗೆ ಟಾರ್ಗೆಟ್ ಮಾಡಿದ್ದಾರೆ ಹೊಲಗಳಿಗೆ ಹೋದಾಗ ಕಲ್ಲಿನಿಂದ ಹೊಡೆಯುತ್ತಿದ್ದಾರೆ ಎಂದು ನೊಂದವರು ಅಳಲು ತೋಡಿಕೊಳ್ಳುತ್ತಿದ್ದಾರೆ. ಅಂಗಡಿಯಲ್ಲಿ ಪ್ರವೇಶ ನೀಡದ,ಕಟಿಂಗ್ ಮಾಡಲು ತಿರಸ್ಕರಿಸುವ ಅಂಗಡಿಕಾರರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಜಿಲ್ಲೆ ವಿವಿಧ ಅಧಿಕಾರಿಗಳು, ಹೋರಾಟಗಾರರು ಹಾಗೂ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ