ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಸ್ತುವಾರಿ ಸಚಿವ ಮಂಕಾಳ್ ವೈದ್ಯರಿಂದ ಇಲಾಖಾ ಪ್ರಗತಿ ಪರಿಶೀಲನ ಸಭೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಾ ಆಡಳಿತ ಸೌಧ/ತಹಶೀಲ್ದಾರ್ ಕಚೇರಿಯ ಸಭಾಭವನ ಮುಂಡಗೋಡದಲ್ಲಿ ನಡೆದ ಮುಂಡಗೋಡ ತಾಲೂಕಿನ ಇಲಾಖಾ ಪ್ರಗತಿ ಪರಿಶೀಲನಾ ಸಭೆ ಹಾಗೂ ಬರ ನಿರ್ವಹಣೆ ಸಭೆಯನ್ನು ಮಾನ್ಯ ಮಂಕಾಳ ಎಸ್ ವೈದ್ಯ ಅವರು ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು ಸೂಕ್ತ ಮುಂಜಾಗ್ರತ ಕ್ರಮವಹಿಸಲು ಸೂಚನೆ ನೀಡಿದರು.
ಈ ವೇಳೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಕುರಿತು ಚರ್ಚಿಸಲಾಯಿತು.ಮುಂಡಗೋಡ ತಾಲೂಕು ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಇರುವ ಕಾರಣ ಬರ ಪರಿಸ್ಥಿತಿ ನಿರ್ವಹಣೆಯ ಕುರಿತು ಅಧಿಕಾರಿಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ಸಚಿವರು ನೀಡಿದರು.
ಮುಂಡಗೋಡ ಜನರ ಬಹುದಿನಗಳ ಬೇಡಿಕೆಯಾದ ಬಸ್ ಡಿಪೋ ಉದ್ಘಾಟನೆಯನ್ನು ಲೋಕಸಭಾ ಚುನಾವಣೆ ಬಳಿಕ ನೆರವೇರಿಸಲಾಗುವುದು ಎಂದರು.
ಬರ ನಿಮಿತ್ತ ಮುಂಡಗೋಡ ತಾಲೂಕಿನಲ್ಲಿ ಕುಡಿಯುವ ನೀರಿನ ಸಂಬಂಧ ಆಗುತ್ತಿರುವ ಸಮಸ್ಯೆಗಳು ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಸುವ ಕುರಿತು ಸಚಿವರು ಚರ್ಚೆ ನಡೆಸಿದರು.
ಬಳಿಕ ಎಲ್ಲಾ ಇಲಾಖೆಗಳ ಪ್ರಗತಿ ವರದಿಗಳನ್ನು ಪರಿಶೀಲನೆ ಮಾಡಿದರು.
ಇದೇ ವೇಳೆ ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ, ತಾಲೂಕ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಟಿ ವಾಯ್ ದಾಸನಕೊಪ್ಪ,ಮಾಜಿ ಶಾಸಕರಾದ ವಿ ಎಸ್ ಪಾಟೀಲ್,ಸಮಾಜ ಕಲ್ಯಾಣ ಇಲಾಖೆ,ಸಾಮಾಜಿಕ ಅರಣ್ಯ,ಸಣ್ಣ ನೀರಾವರಿ ಇಲಾಖೆ,ಪಶು ಸಂಗೋಪನಾ ಇಲಾಖೆ,ಹೆಸ್ಕಾಂ,ಪೊಲೀಸ್ ಇಲಾಖೆ,ಕೃಷಿ ಇಲಾಖೆ, ಪಿಡಬ್ಲುಡಿ,ತೋಟಗಾರಿಕೆ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ