ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ವರಿಷ್ಠರ ಭೇಟಿ:ಮುಸ್ಲಿಂ ಮುಖಂಡರ ಹೇಳಿಕೆಅಯಾಜ್ ಖಾನ್‍ಗೆ ಕಾಂಗ್ರೆಸ್ ಟಿಕೆಟ್‍ಗೆ ಆಗ್ರಹ

ಬೀದರ್:ಮುಂಬರುವ ಲೋಕಸಭೆ ಚುನಾವಣೆಯ ಬೀದರ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಿರಿಯ ಮುಖಂಡ ಅಯಾಜ್ ಖಾನ್ ಅವರಿಗೆ ನೀಡಬೇಕು ಎಂದು ಬೀದರ್ ಜಿಲ್ಲಾ ಕುಲ್ ಜಮಾತ್ ಅಧ್ಯಕ್ಷ ಮುಫ್ತಿ ಅಬ್ದುಲ್ ಗಫಾರ್ ಒತ್ತಾಯಿಸಿದರು.
ಶೀಘ್ರದಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಅಲ್ಪಸಂಖ್ಯಾತರಿಗೆ ಬೀದರ್ ಕ್ಷೇತ್ರದ ಟಿಕೆಟ್ ಕೊಡುವಂತೆ ಬೇಡಿಕೆ ಮಂಡಿಸಲಾಗುವುದು ಎಂದು ನಗರದ ಸಿದ್ಧಿ ತಾಲೀಂನ ಉರ್ದು ಹಾಲ್‍ನಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅಯಾಜ್ ಖಾನ್ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಲ್ಲಿ ಒಬ್ಬರಾಗಿದ್ದಾರೆ. ಬೀದರ್, ಕಲಬುರಗಿ, ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ. ಬಡ ಮಕ್ಕಳಿಗೆ ಉಚಿತ ಶಿಕ್ಷಣ ಕೊಡುತ್ತಿದ್ದಾರೆ. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿದ್ದಾರೆ. ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದಾರೆ. ಅವರಿಗೆ ಟಿಕೆಟ್ ನೀಡಿದರೆ ಗೆಲುವು ನಿಶ್ಚಿತವಾಗಿದೆ ಎಂದು ಹೇಳಿದರು.
ಸ್ವಾತಂತ್ರ್ಯ ನಂತರ ಮೊದಲ ಚುನಾವಣೆಯಲ್ಲಿ ಮಾತ್ರ ಬೀದರ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಲ್ಪಸಂಖ್ಯಾತರಿಗೆ ಕೊಡಲಾಗಿತ್ತು. ಆಗ ಉತ್ತರ ಪ್ರದೇಶದ ಶೌಕತ್ ಅನ್ಸಾರಿ ಆಯ್ಕೆಯಾಗಿದ್ದರು. ಅನಂತರ ಈವರೆಗೂ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿಲ್ಲ ಎಂದು ತಿಳಿಸಿದರು.
ರಾಜ್ಯದ ಎರಡು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡುವುದಾಗಿ ರಾಜ್ಯದ ಕಾಂಗ್ರೆಸ್ ಮುಖಂಡರು ಭರವಸೆ ನೀಡಿದ್ದಾರೆ. ಬೀದರ್ ಕ್ಷೇತ್ರದ ಟಿಕೆಟ್ ಕೊಟ್ಟರೆ ಒಳ್ಳೆಯದು ಎಂದು ತಿಳಿಸಿದರು.
ಅಲ್ಪಸಂಖ್ಯಾತರು ನಿರಂತರ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತ ಬಂದಿದ್ದಾರೆ. ಪಕ್ಷದ ಟಿಕೆಟ್ ಕೇಳುವುದು ನಮ್ಮ ಹಕ್ಕಾಗಿದೆ. ಅಯಾಜ್ ಖಾನ್, ಅಬ್ದುಲ್ ಮನ್ನಾನ್ ಸೇಠ್, ಡಾ. ಮಕ್ಸೂದ್ ಚಂದಾ ಇವರಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಸಂತಸ ಎಂದು ಜಮೀಯತ್ ಉಲ್ಮಾ ಜಿಲ್ಲಾ ಅಧ್ಯಕ್ಷ ಅಬ್ದುಲ್ ಗಣಿ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಉಮರ್ ಖುರೇಶಿ, ಎಹತೆ ಶಾಮ್ ಉಲ್ ಹಕ್, ಅಲ್ಲಾಬಕ್ಷ, ಇಫ್ತೆಕಾರ್ ಹುಸೇನ್, ಸಗೀರ್, ರಫಿಕ್ ಹಾಗೂ ಮನ್ಸೂರ್ ಅಹಮ್ಮದ್ ಖಾದ್ರಿ ಇತರರು ಇದ್ದರು.

ವರದಿ:ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ