ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಿದ ಶಾಸಕ ಎಂ ಆರ್ ಮಂಜುನಾಥ್.

ಹನೂರು:ವಸತಿ ಫಲಾನುಭವಿಗಳು ನಿಗಧಿತ ಅವಧಿಯೊಳಗೆ ವಸತಿ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸಿ ಸಾಕಾರಗೊಳಿಸಬೇಕೆಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ತಾಲ್ಲೂಕಿನ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ  ಏರ್ಪಡಿಸಲಾಗಿದ್ದ ಬಸವ ವಸತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ (ಗ್ರಾಮೀಣ), ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಿ ಬಳಿಕ ಮಾತನಾಡಿದರು.
ಸರ್ಕಾರಗಳು ಗುಡಿಸಲು ಮುಕ್ತ ರಾಜ್ಯವಾಗಿಸುವ ನಿಟ್ಟಿನಲ್ಲಿ ಅನೇಕ ವಸತಿ ಸೌಲಭ್ಯಗಳನ್ನು ನೀಡುತ್ತಾ ಬಂದಿವೆ.ವಿ.ಸೋಮಣ್ಣ ವಸತಿ ಸಚಿವರಾಗಿದ್ದ ವೇಳೆ  ನಮಗೆ ಹೆಚ್ಚಿನ ವಸತಿ ಸೌಲಭ್ಯಗಳನ್ನು ಅನುಮೋದನೆ ನೀಡಿದ್ದರು.ಕ್ಷೇತ್ರಕ್ಕೆ ಇನ್ನೂ 20 ರಿಂದ 25 ಸಾವಿರ ಮನೆಗಳ ಅವಶ್ಯಕತೆ ಇದೆ.ಎಂ.ಪಿ.ಚುನಾವಣೆ ಬಳಿಕ ನಾನೇ ಖುದ್ದು ಗ್ರಾಮಗಳಿಗೆ ಭೇಟಿ ನೀಡಿ ವಸತಿ ರಹಿತರನ್ನು ಗುರುತಿಸಿ ಸೌಕರ್ಯವನ್ನು ಒದಗಿಸಲಾಗುವುದು.ಕ್ಷೇತ್ರದಲ್ಲಿ ಕುಡಿಯುವ ನೀರು ರಸ್ತೆ ವಿದ್ಯುತ್ ಶಿಕ್ಷಣ ಆರೋಗ್ಯ ಸಂಬಂಧಿತ ಸೌಕರ್ಯಗಳಾಗಬೇಕಾಗಿದೆ.ರಾಮಪುರ ಗರಿಕೆಕಂಡಿ ಮುಖ್ಯ ರಸ್ತೆಗೆ 25 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ.ಹನೂರಿನ ಆಸ್ಪತ್ರೆಗೆ 100 ಬೆಡ್ ಗಳ ಹಾಸಿಗೆ ವ್ಯವಸ್ಥೆ,ರಾಮಪುರದಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪನೆ ಮುಂತಾದ ಕಾರ್ಯಗಳನ್ನು ಕೈಗೊಳ್ಳಲಾಗುವುದು  ಎಂದರು.
ಕಾರ್ಯಕ್ರಮದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲಾಗಿರುವ ವ್ಯಾಟ್ಸಾಪ್ ಮೂಲಕ ಮಾಹಿತಿಯ ಆರ್.ಡಿ.ಪಿ.ಆರ್. ಯನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಉಮೇಶ್, ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳಾದ,ರವಿ,ಪ್ರೇಮಾ, ರುದ್ರನಾಯಕ,ಉಪಾಧ್ಯಕ್ಷರಾದ ಬೇಬಿ,ಹಾಗೂ ಸದಸ್ಯರಾದ ಸರೋಜಭಾಯಿ,ರಾಜೇಂದ್ರ,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು,ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅರ್ಹ ವಸತಿ ಫಲಾನುಭವಿಗಳು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ