ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಸಕರ ಹೆಚ್ಚಿನ ಅನುದಾನದಿಂದ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ:ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್

ಭದ್ರಾವತಿ:ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಶಾಸಕ ಬಿ.ಕೆ ಸಂಗಮೇಶ್ವರ್ ರವರು ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ.ಈ ಹಿನ್ನಲೆಯಲ್ಲಿ ನಗರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದ್ದು,ಆದಷ್ಟು ಶೀಘ್ರದಲ್ಲಿ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ತಿಳಿಸಿದರು.
ನಗರಸಭೆಯ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,ಈಗಾಗಲೇ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಪ್ರಧಾನಮಂತ್ರಿ ಆವಾಜ್ ಯೋಜನೆ ಅಡಿ 2048 ಗುಂಪು ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.ಬೀದಿಬದಿ ವ್ಯಾಪಾರಿಗಳಿಗೆ ಸುಸಜ್ಜಿತವಾದ ಫುಡ್ ಕೋರ್ಟ್ ನಗರದ ವಿವಿಧಡೆ ನಿರ್ಮಿಸಲಾಗುತ್ತಿದೆ.₹215 ಲಕ್ಷ ವೆಚ್ಚದಲ್ಲಿ ಗಾಂಧಿ ವೃತ್ತ ಸಮೀಪ ಕನ್ಸರ್ವೆನ್ಸಿ ರಸ್ತೆಯಲ್ಲಿ, ₹44 ಲಕ್ಷ ವೆಚ್ಚದಲ್ಲಿ ಬಸವೇಶ್ವರ ವೃತ್ತ ಬಳಿ,₹40 ಲಕ್ಷ ವೆಚ್ಚದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಬಳಿ ಹಾಗೂ ₹40 ಲಕ್ಷ ವೆಚ್ಚದಲ್ಲಿ ಜನ್ನಾಪುರ ಕಮರ್ಷಿಯಲ್ ಸ್ಟ್ರೀಟ್(ವಾಣಿಜ್ಯ ರಸ್ತೆ) ಬಳಿ ಕನ್ಸರ್ವೆನ್ಸಿಯಲ್ಲಿ ಫುಡ್ ಕೋರ್ಟ್‌ಗಳನ್ನು ನಿರ್ಮಿಸಲಾಗುವುದು.ಈ ಸಂಬಂಧ ಮಂಜೂರಾತಿಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ ಎಂದರು.

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯ:ತಪ್ಪಿದರೆ ಸೂಕ್ತ ಕ್ರಮ
ಸರ್ಕಾರದ ಆದೇಶದಂತೆ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರದಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ನಗರಸಭೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ,ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು,ಟ್ರಸ್ಟ್‌ಗಳು, ಸಮಾಲೋಚನ ಕೇಂದ್ರಗಳು,ಆಸ್ಪತ್ರೆಗಳು, ಪ್ರಯೋಗಾಲಯಗಳು,ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಪ್ರದರ್ಶಿಸಬೇಕಾಗಿದೆ.ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ನಗರದ ಬಿ.ಎಚ್.ರಸ್ತೆ ಅಂಡರ್ ಬ್ರಿಡ್ಜ್ ಬಳಿ 12 ಅಡಿ ಎತ್ತರದ ಡಾ. ಬಿ.ಆರ್.ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ರಾಜ್ಯ ಸರ್ಕಾರ ಈ ಬಾರಿ ಆಯವ್ಯಯದಲ್ಲಿ ಅತ್ಯಾಧುನಿಕ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣ ಮಾಡಲು ₹10 ಕೋಟಿ ಅನುದಾನ ಮಂಜೂರಾತಿ ಮಾಡಿದ್ದು,ಕಾಮಗಾರಿ ಕೈಗೊಳ್ಳಲು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು,ಶಿವಮೊಗ್ಗ ಅವರಿಗೆ ನಿವೇಶನ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ನಗರಸಭೆ ವ್ಯಾಪ್ತಿಯಲ್ಲಿ ವಿವಿಧೆಡೆ ಒಟ್ಟು ₹230 ಲಕ್ಷ ಅನುದಾನದಲ್ಲಿ ಸಮುದಾಯ ಶೌಚಾಲಯ,ಸಾರ್ವಜನಿಕ ಶೌಚಾಲಯ, ಆಸ್ಪಿರಿಯೇಶನಲ್ ಪಬ್ಲಿಕ್ ಟಾಯ್ಲೆಟ್ ಹಾಗೂ ಮೂತ್ರಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್,ನಗರಸಭಾ ಸದಸ್ಯರುಗಳಾದ ಗೀತಾ ರಾಜ್ ಕುಮಾರ್,ಅನುಸುಧಾ ಮೋಹನ್, ಚನ್ನಪ್ಪ,ಕೆ.ಸುದೀಪ್ ಕುಮಾರ್,ಬಿ.ಎಂ ಮಂಜುನಾಥ್, ಟಿಪ್ಪುಸುಲ್ತಾನ್,ಜಾರ್ಜ್,ಆನೇಕೊಪ್ಪ ಬಸವರಾಜ್, ಪರಿಸರ ಅಭಿಯಂತರ ಪ್ರಭಾಕರ್,ಕಂದಾಯಾಧಿಕಾರಿ ಎಂ.ಎಸ್ ರಾಜ್‌ಕುಮಾರ್,ವ್ಯವಸ್ಥಾಪಕಿ ಸುನಿತಾಕುಮಾರಿ ಸೇರಿದಂತೆ ನಗರಸಭೆಯ ವಿವಿಧ ಅಧಿಕಾರಿಗಳು,ಸಿಬ್ಬಂದಿ ಉಪಸ್ಥಿತರಿದ್ದರು.

ವರದಿ:ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ