ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವನಸಿರಿ ಫೌಂಡೇಶನ್ ತಾಲೂಕ ಘಟಕ ಕಂಪ್ಲಿ ವತಿಯಿಂದ ಹಕ್ಕಿ ಪಕ್ಷಿಗಳಿಗೆ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ

ಕಂಪ್ಲಿ ತಾಲೂಕಿನ ನಂ 3 ಸಣಾಪುರ ಗ್ರಾಮದ ಶ್ರೀ ಉದ್ಭವ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಂಪ್ಲಿ ವನಸಿರಿ ಫೌಂಡೇಶನ್ ತಾಲೂಕ ಘಟಕದ ವತಿಯಿಂದ ಬೇಸಿಗೆಯ ಕಾಲದ ಅಂಗವಾಗಿ ಹಕ್ಕಿ ಪಕ್ಷಿಗಳಿಗೆ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ ಕಾರ್ಯಕ್ರಮ ನೆರವೇರಿತು.ಈ ಕಾರ್ಯಕ್ರಮವನ್ನು ಪರಮ ಪೂಜ್ಯ ಶ್ರೀ ಶಿವ ಶಾಂತವೀರ ಶರಣರು ಬಳಗಾನೂರ ಸುಕ್ಷೇತ್ರ ಅವರು ಹಕ್ಕಿ ಪಕ್ಷಿಗಳಿಗೆ ಕಾಳು ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹಕ್ಕಿ ಪಕ್ಷಿಗಳ ಅರವಟ್ಟಿಗೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸುಕ್ಷೇತ್ರ ಬಳಗಾನೂರಿನ ಪರಮ ಪೂಜ್ಯ ಶ್ರೀ ಶಿವಶಾಂತವೀರ ಶರಣರು ಮಾತನಾಡಿ ದಯವಿರಲಿ ಸಕಲಜೀವರಾಶಿಗಳಲ್ಲಿ ದಯವೇ ಧರ್ಮದ ಮೂಲವಯ್ಯಾ ಎನ್ನುವಂತೆ ಯಾವುದೇ ಜೀವರಾಶಿಗಳಿಗೆ ದಯೆ ತೋರಿದರೆ ನಮ್ಮ ಮಾನವ ಧರ್ಮಕ್ಕೆ ಸುಖವುಂಟಾಗಲಿದೆ.ವನಸಿರಿ ಫೌಂಡೇಶನ್ ನಿಂದ ಸುಡುಬೇಸಿಗೆಯಲ್ಲಿ ಪ್ರಾಣಿಪಕ್ಷಿಗಳಿಗೆ ಕಾಳು ಮತ್ತು ನೀರು ಹಾಕು ಅರವಟ್ಟಿಗೆ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ.ಬಿಸಿನ ಬೇಗೆಯಿಂದ ಪ್ರಾಣಿ ಪಕ್ಷಿಗಳಿಗೆ ನೀರಿನ ದಾಹ ಹೆಚ್ಚಾಗುತ್ತಿರುವವ ಸಂದರ್ಭದಲ್ಲಿ ಇಂತಹ ಕಾರ್ಯಗಳು ಹೆಚ್ಚು ಹೆಚ್ಚು ನಡೆಯಬೇಕು ಕಂಪ್ಲಿ ಯುವಕರು ಇದನ್ನು ಹಮ್ಮಿಕೊಂಡಿರುವುದು ಉತ್ತಮ ಬೆಳವಣಿಗೆ ನಿಮ್ಮಂತಹ ಯುವಕರ ಕಾಳಜಿ,ಪ್ರೀತಿ ದೇವರು ಒಳ್ಳೆಯದನ್ನು ಮಾಡುತ್ತಾನೆ ಎಂದು ಶ್ರೀಗಳು ಆರ್ಶೀವದಿಸಿದರು.
ಈ ಸಂದರ್ಭದಲ್ಲಿ ಕಂಪ್ಲಿ ತಾಲೂಕ ವನಸಿರಿ ಫೌಂಡೇಶನ್ ಘಟಕದ ಪದಾಧಿಕಾರಿಗಳಾದ ವಿನೋದ ಕುಮಾರ ಒಂಟೆ,ಪ್ರಶಾಂತ ಕನಕಗಿರಿ,ಬಸವರಾಜ ಕನಕಗಿರಿ,ಶಂಕರಗೌಡ ಪಾಟೀಲ, ಶರಣೆಗೌಡರೆಡ್ಡಿ,ಬದ್ರಿಗೌಡ ರೆಡ್ಡಿ,ಶರಣಪ್ಪಗೌಡ ಹಾಗೂ ದೇವಸ್ಥಾನದ ಸೇವಾಸಮಿತಿ ಸದಸ್ಯರು,ಗ್ರಾಮದ ಹಿರಿಯರು,ಪರಿಸರ ಪ್ರೇಮಿಗಳು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ