ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭದ್ರಾವತಿಯಲ್ಲಿ ಭಾರತ್ ಅಕ್ಕಿ ವಿತರಣೆಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ

ಭದ್ರಾವತಿ:ಕೇವಲ 29 ರೂಪಾಯಿಗೆ ಒಂದು ಕೆ ಜಿ
ಉತ್ಕೃಷ್ಟ ಅಕ್ಕಿಯನ್ನು ನರೇಂದ್ರ ಮೋದಿಜಿ ಯವರ ಭಾರತ ಸರ್ಕಾರ ಎಲ್ಲಾ ಜನತೆಗೂ ವಿತರಿಸುತ್ತಿದೆ. 290 ರೂ. ಗಳಿಗೆ 10 ಕೆಜಿಯ ಅಕ್ಕಿಯನ್ನು ಪಡೆಯಬಹುದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಭದ್ರಾವತಿಯ ಕನಕ ಮಂಟಪದಲ್ಲಿ ಅಕ್ಕಿ ವಿತರಣೆಗೆ ಚಾಲನೆ ನೀಡಿ ಮಾತನಾಡಿ ಒಂದು ಮೊಬೈಲ್ ಸಂಖ್ಯೆಗೆ 10 ಕೆಜಿ ನೀಡಲಾಗುತ್ತದೆ.ಇದೊಂದು ಕೆಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು,ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮಕರಣ ಮಾಡಿದ್ದಾರೆ.ಸುಧಾಮೂರ್ತಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಚುನಾವಣೆ ಸಂದರ್ಭದಲ್ಲಿ ನಮ್ಮ ಶಕ್ತಿ ಅಂದ್ರೆ ನಮ್ಮ ಕಾರ್ಯಕರ್ತರು.ನಮ್ಮ ಶಕ್ತಿ ನರೇಂದ್ರಮೋದಿ.ಯುವಕರಿಗೆ,ರೈತರಿಗೆ,ಮಹಿಳೆಯರಿಗೆ ಅಭಿವೃದ್ಧಿ ವಿಚಾರಗಳನ್ನು ತಿಳಿಸುವ ಮೂಲಕ ಮತ ಕೇಳುತ್ತೇವೆ ಎಂದರು.
ಭದ್ರಾವತಿ ಮಂಡಲ ಬಿಜೆಪಿ ಅಧ್ಯಕ್ಷ ಜಿ.ಧರ್ಮ ಪ್ರಸಾದ್ ನೇತ್ರತ್ವದಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ, ತಾಲ್ಲೂಕು ಜೆಡಿಎಸ್ ಆಧ್ಯಕ್ಷ ಆರ್.ಕರುಣಾಮೂರ್ತಿ, ಬಿಜೆಪಿ ನಗರಸಭಾ ಸದಸ್ಯೆ ಅನುಪಮಾ ಚನ್ನೇಷ್, ಮುಖಂಡರುಗಳಾದ ಮಂಗೋಟೆ ರುದ್ರೇಶ್,
ಕೂಡ್ಲಿಗೆರೆ ಹಾಲೇಶ್,ಮಂಜುನಾಥ್ ಕದಿರೇಶ್,ಬಿ.ಜಿ ರಾಮಲಿಂಗಯ್ಯ,ನಾರಾಯಣಪ್ಪ,ತೀರ್ಥಯ್ಯ,ಬಾರಂದೂರು ಪ್ರಸನ್ನ,ಪಿ.ಸತೀಶ್ ಕುಮಾರ್,ಎಂಪಿಎಂ ರಂಗೋಜಿ,ಉಪ್ಪಾರ ರಾಜಶೇಖರ್ ಮುಂತಾದವರು ಭಾಗವಹಿಸಿದ್ದರು.

ವರದಿ:ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ