ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿಯನ್ನು ಕಳೆದುಕೊಂಡು ಪತ್ರಿಕಾ ರಂಗ ಅನಾಥವಾಗಿದೆ:ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ದೇವರಾಜು ನಾಯ್ಡು

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ
ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಹಮ್ಮಿಕೊಂಡಿದ್ದ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು
ಶ್ರೀಯುತ ವಾಸುರವರು ಪತ್ರಿಕಾ ರಂಗದಲ್ಲಿ ದುಡಿದು ಸರಳ ಸಜ್ಜನಿಕೆಯ ರಾಜಕಾರಣಿ ಸಹ ಆಗಿದ್ದರು ಇಂತಹ ಪ್ರಾಮಾಣಿಕ ರಾಜಕಾರಣಿಗಳು ಇತ್ತೀಚಿನ ದಿನಗಳಲ್ಲಿ ಸಿಗುವುದು ಅತ್ಯಂತ ವಿರಳವಾಗಿದೆ ಈ ನಿಟ್ಟಿನಲ್ಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು.
ಪ್ರಜಾನುಡಿ ಪತ್ರಿಕೆಯ ವರದಿಗಾರ ಮಹಾದೇವ ಮಾತನಾಡಿ ಶ್ರೀಯುತ ವಾಸು ರವರು ಶಿಕ್ಷಣ ಸಂಸ್ಥೆಯ ರೂವಾರಿಯಾಗಿದ್ದರು ಜೊತೆಗೆ ಪತ್ರಿಕೆಯನ್ನು ಸಹ ನಡೆಸುತ್ತಿದ್ದರು ಈ ಹಿನ್ನಲೆ ನೆನ್ನೆ ದಿನ ನಮ್ಮನ್ನೆಲ್ಲ ಬಿಟ್ಟು ಅಗಲಿದ್ದು ದುಃಖದ ದಿನವಾಗಿದೆ ಹಾಗಾಗಿ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ಕುಟುಂಬಕ್ಕೆ ನೀಡಲಿ ಎಂದರು.
ಇದೆ ಸಂದರ್ಭದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾದೇಶ್ ಗೌಡ, ಹಾಗೂ ಪತ್ರಕರ್ತರಾದ ಸೋಮಣ್ಣ, ಮಹದೇವಸ್ವಾಮಿ,ಅಜ್ಜೀಪುರ ಸುರೇಶ್,ರವಿ,ಗೋವಿಂದ,ಉಸ್ಮಾನ್,ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ