ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆ ಬಗೆಹರಿಸಲು ಮನಸಿಲ್ಲ,ರೈತರಿಂದ ಆಕ್ರೋಶ ದಿನ

ಗದಗ:ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ಪ್ಯಾಸಿಸ್ಟ್ ದಾಳಿಯನ್ನು ಖಂಡಿಸಿ,ಭಾರತ ಡಬ್ಲ್ಯೂ.ಟಿ.ಓ.ದಿಂದ ಹೊರ ಬರಲು ಒತ್ತಾಯಿಸಿ ದೇಶಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿದ್ದರಿಂದ, ಸಂಯುಕ್ತ ಹೋರಾಟ ಕರ್ನಾಟಕ ಎಸ್.ಕೆ.ಎಮ್ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿ ಆರ್ ನಾರಾಯಣರೆಡ್ಡಿ ಬಣ್ಣದ ಕರೆಯ ಮೇರೆಗೆ ತಿಮ್ಮಾಪೂರ ಗ್ರಾಮದ ಸಂಗೋಳ್ಳಿ ರಾಯಣ್ಣನ ವೃತ್ತದಲ್ಲಿ ಪಂಜಿನ ಪ್ರತಿಭಟನಾ ಮೆರವಣಿಗೆ ಮಾಡುವ ಮೂಲಕ ಆಕ್ರೋಶ ದಿನ ಆಚರಣೆ ಮಾಡುವ ಮೂಲಕ ಬಹಿರಂಗ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್ ಬಾಬರಿ ಅವರು ಮಾತನಾಡುತ್ತಾ ದ್ವೇಷದ ಕೋಮುವಾದಿ ರಾಜಕೀಯದಲ್ಲಿ ಪ್ರಾಣ ಕಳೆದುಕೊಂಡ ಬಿಜೆಪಿಯ ಕಾರ್ಯಕರ್ತರಿಗೆ ತಲಾ 20ರಿಂದ 50 ಲಕ್ಷ ರೂ ಪರಿಹಾರ ಕೊಡುವ ಕೇಂದ್ರ ಸರ್ಕಾರ,ದೆಹಲಿಯ ಐತಿಹಾಸಿಕ ರೈತರ ಚಳುವಳಿಯಲ್ಲಿ ಪ್ರಾಣ ಅರ್ಪಿಸಿದ 780 ರೈತರ ಕುಟುಂಬಕ್ಕೆ ಒಂದು ರೂಪಾಯಿ ಪರಿಹಾರ ಕೊಟ್ಟಿಲ್ಲ.
ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿಲ್ಲ.ರೈತರ ಸಾಲ ಮನ್ನಾ ಮಾಡಿಲ್ಲ,ಬೆಳೆ ನಷ್ಟ ಪರಿಹಾರ,ಬೆಳೆ ವಿಮೆ ಹಾಗೂ ಉದ್ಯೋಗ ಖಾತ್ರಿ ಕೂಲಿಯನ್ನೂ ಕೊಡುತ್ತಿಲ್ಲ.
ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದಾರೆ.
ಹೋರಾಟ ನಿರತ ರೈತರ ಮೇಲೆ ಗೋಲಿಬಾರ್ ಮಾಡಿ ಕೊಂದು ಹಾಕಿದೆ.ಲಾಠಿ ಚಾರ್ಜ್ ಮಾಡಿರುವುದು ಮತ್ತು ಹೊಗೆ ಬಾಂಬ್ ಹಾಕಿರುವುದು,ರಸ್ತೆಗಳಿಗೆ ಮೊಳೆ ಹೊಡೆದಿರುವುದು,ರಸ್ತೆಗೆ ದೊಡ್ಡ ಗಾತ್ರದ ಕಾಂಕ್ರೀಟ್ ಬ್ಲಾಕ್ ಹಾಕಿರುವ ಬೆಳವಣಿಗೆ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಪರಿಹರಿಸುವ ಮನಸ್ಸಿಲ್ಲ ಎನ್ನುವುದು ಸ್ಪಷ್ಟವಾಗಿದೆ.
ಸರ್ಕಾರದ ಫ್ಯಾಸಿಸ್ಟ್ ನೀತಿಯ ವಿರುದ್ಧ ದೇಶದ ಜನರು ಬೀದಿಗಿಳಿಯಬೇಕಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶರಣಪ್ಪ ಜೋಗಿನ,ಹನುಮಪ್ಪ ತಳವಾರ,ಉದಯ ಗಂಗರಾತ್ರಿ,ಮಾರುತಿ ಕೊಪದ್ದ, ಹೇಮಂತ ಉಂಡಿ ಗಣೇಶ ಅಕ್ಕಸಾಲಿ,ಬ‌ಸವರಾಜ ಬಂಟಗೌಡ್ರ,ಫಕೀರಪ್ಪ ಗುಡ್ಲಾನೂರ,ಮಂಜುನಾಥ ಗಂಗರಾತ್ರಿ,ಸುರೇಶ ಹಳ್ಳಿಕೇರಿ ಇನ್ನೂ ನೂರಾರು ರೈತರು ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ