ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಕ್ಕಿ ಪಕ್ಷಿಗಳಿಗೆ ಕಾಳು ನೀರು ಹಾಕುವ ಕಾರ್ಯ ಕೈಗೊಂಡ ವನಸಿರಿ ತಂಡದ ಕಾರ್ಯ ಶ್ಲಾಘನೀಯ:ಚಲನಚಿತ್ರ ನಟ ವೀರೇಶ ನಟೆಕಲ್

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಕ್ಕಿ ಪಕ್ಷಿಗಳಿಗೆ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ ಕಾರ್ಯಕ್ರಮವನ್ನು ಚಲನಚಿತ್ರ ನಟ ಹಾಗೂ ಇಂಡೇನ್ ಗ್ಯಾಸ್ ಮಾಲಿಕರಾದ ವೀರೇಶ ನಟೆಕಲ್ ಅವರು ಮಣ್ಣಿನ ಮಡಿಕೆಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರೂ ನಮ್ಮ ಜೊತೆಯಲ್ಲಿ ವಾಸಿಸುವ ಹಕ್ಕಿ ಪಕ್ಷಿಗಳಿಗೆ ನೀರುಣಿಸಲು ಮುಂದಾಗಬೇಕು.ಪ್ರಾಣಿ ಪಕ್ಷಿಗಳಿಗೂ ಜೀವಿಸುವ ಹಕ್ಕಿದೆ ಮನುಷ್ಯರಾದ ನಾವುಗಳು ನೀರು ಕಾಳು ಹಾಕಿ ಜೀವಿಸಲು ಸಹಾಯ ಮಾಡಬೇಕು ಆಗ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಇಂತಹ ಕಾರ್ಯಗಳನ್ನು ಈಗಾಗಲೇ ವನಸಿರಿ ಫೌಂಡೇಶನ್ ತಂಡ ಕೈಗೆತ್ತಿಕೊಂಡಿರುವುದು ಶ್ಲಾಘನೀಯ ಇವರ ಪರಿಸರ ಸೇವೆ ಅಗಾಧವಾಗಿದೆ ನಾವೆಲ್ಲರೂ ಕೈ ಜೋಡಿಸೋಣ ಎಂದರು.
ನಂತರ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ರೈತ ಮುಖಂಡರಾದ ಶಿವನಗೌಡ ಗೊರೆಬಾಳ ಮಾತನಾಡಿ ಸುಮಾರು ವರ್ಷಗಳಿಂದ ಅಮರೇಗೌಡ ಮಲ್ಲಾಪುರ ಮತ್ತು ಅವರ ತಂಡ ಪರಿಸರ ರಕ್ಷಣೆ,ಪ್ರಾಣಿಪಕ್ಷಿಗಳ ರಕ್ಷಣೆಯಲ್ಲಿ ತೊಗಿದೆ ಪರಿಸರ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ.ನಮ್ಮ ಭಾಗದಲ್ಲಿ ಇಂತಹ ಪರಿಸರ ಪ್ರೇಮಿ ಹುಟ್ಟಿಕೊಂಡಿರುವುದು ತುಂಬಾ ಹೆಮ್ಮೆಯ ವಿಷಯ ಪ್ರತಿಯೊಬ್ಬರೂ ನಿಮ್ಮ ನಿಮ್ಮ ಮನೆಯ ಮಹಡಿಗಳ ಮೇಲೆ,ಹತ್ತಿರದ ಗಿಡಮರಗಳಿಗೆ ಅರವಟ್ಟಿಗೆ ನಿರ್ಮಿಸಿ ಪ್ರಾಣಿ ಪಕ್ಷಿಗಳಿಗೆ ಆಹಾರ ನೀಡಿ ಪಕ್ಷಿಗಳ ಸಂಕುಲ ಉಳಿವಿಗಾಗಿ ಅಮರೇಗೌಡ ಮಲ್ಲಾಪುರ ಅವರ ಸಹಕಾರ ನೀಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪುರ, ಗ್ರಾಮದ ಹಿರಿಯರು,ವನಸಿರಿ ಫೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ