ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮೊಹಮ್ಮದ್ ಫಿರೋಜ್ ಖಾನ್ ಬೀದರ್ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರನ್ನಾಗಿ ನೇಮಕ

ಬೀದರ್:ಇಂದು ಬೀದರನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಕ್ಫ್ ಬೋರ್ಡ್ ಅಡ್ವೈಸರಿ ಚೇರ್ಮನ್ ಆಗಿ ಎಂ.ಡಿ ಫಿರೋಜ್ ಖಾನ್ ರವರು ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಪ್ರಮಾಣ ವಚನ ಸ್ವೀಕರಿಸಿದರು.
ನಂತರ ಅವರ ಹಿತೃಷಿಗಳು,ಬೆಂಬಲಿಗರು, ಅಭಿಮಾನಿಗಳಿಂದ ವಿಶೇಷ ಸನ್ಮಾನ ಮಾಡಲಾಯಿತು.ಇದಾದ ಬಳಿಕ ಬೀದರ್ ನ ಓಲ್ಡ್ ಸಿಟಿಯ ಗವಾನ ಚೌಕ್ ಬಳಿ ಅವರ ಅಭಿಮಾನಿ ಬಳಗದ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು,ತದನಂತರದಲ್ಲಿ ಎಂ.ಡಿ ಫಿರೋಜ್ ಖಾನ್ ರವರಿಗೆ ಸನ್ಮಾನ ಕಾರ್ಯಕ್ರಮ ಜರಗಿತು.
ಎಂ.ಡಿ ಫಿರೋಜ್ ಖಾನ್ ರವರು ಏನ್.ಎಸ್.ಯು.ಐ. ಸದಸ್ಯರಾಗಿ ಗುರುತಿಸಿಕೊಂಡು ಯುವ ನಾಯಕರಾಗಿ ಯುವಕರಿಗೆ ಮಾದರಿಯಾಗಿದ್ದಾರೆ.ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಎಂ.ಡಿ ಫಿರೋಜ್ ಖಾನ್ ರವರು ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಗೆ ಡಿಕೆ ಶಿವಕುಮಾರ್ ರವರಿಗೆ , ಜಮೀರ್ ಅಹ್ಮದ್ ಖಾನ್ ರವರಿಗೆ,ಈಶ್ವರ್ ಖಂಡ್ರೆ ರವರಿಗೆ,ರಹೀಮ್ ಖಾನ್ ರವರಿಗೆ ಈ ಮೂಲಕವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಅನಧಿಕೃತ ನೊಂದಣಿ ಇಲ್ಲದ ಮಸೀದಿಗಳಿಗೆ ವಕ್ಫ್ ಅಡಿಯಲ್ಲಿ ಭದ್ರತೆ ನೀಡಲಾಗುವುದು,ನನಗೆ ನೀಡಿದ ಜವಾಬ್ದಾರಿಯನ್ನು ಪ್ರಮಾಣಿಕವಾಗಿ ವರಿಷ್ಠರ ಮಾರ್ಗದರ್ಶನದಲ್ಲಿ ನಿಭಾಯಿಸುವುದಾಗಿ ಹಾಗೂ ನೀಡಿದ ಸ್ಥಾನಕ್ಕೆ ನ್ಯಾಯಯುತವಾಗಿ ಕಾರ್ಯ ನಿರ್ವಹಿಸುವುದಾಗಿ ಈ ಮೂಲಕ ಮಾತನಾಡಿ ಭರವಸೆಯನ್ನು ವ್ಯಕ್ತಪಡಿಸಿದರು.

ವರದಿ:ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ