ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಟೈಮ್ಸ್ ಪತ್ರಿಕೆ ಬಿಡುಗಡೆ.

ಕೊಪ್ಪಳ:ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಮಹಿಳಾ ಪದವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಡಾ.ನರಸಿಂಹ ಗುಂಜಹಳ್ಳಿ ಅವರ ಸಂಪಾದಕತ್ವದಲ್ಲಿ ಮಹಿಳಾ ಟೈಮ್ಸ್ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಆರಂಭದಲ್ಲಿ ಕುಮಾರಿ ಬಸವಶ್ರೀ ಅವರು ಪ್ರಾರ್ಥನೆ ಗೀತೆ ಹಾಡಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸರಕಾರಿ ಅಭಿಯೋಜಕಿ ವಕೀಲೆ ಶ್ರೀಮತಿ ಗೌರಮ್ಮ ದೇಸಾಯಿ ಮಾತನಾಡಿ “ಇಂದು ಮಹಿಳೆಯರು ಕೇವಲ ಶಿಕ್ಷಣ ಪಡೆದರೆ ಸಾಲದು,ಅವರೂ ಮುಖ್ಯ ವಾಹಿನಿಗೆ ಬರಬೇಕು,ಆಗಲೇ ಸಮಾಜದಲ್ಲಿ ಮಹಿಳೆಯರ ಅಭಿವೃದ್ಧಿ ಸಾಧ್ಯ”ಎಂದರು.
ಕನ್ನಡ ವಿಭಾಗದ ಡಾ.ಹುಲಿಗೆಮ್ಮ ಬಿ.ಪ್ರಾಸ್ತಾವಿಕವಾಗಿ ಮಾತನಾಡಿದರು.ವೇದಿಕೆಯಲ್ಲಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ,ಡಾ.ಅಶೋಕ ಕುಮಾರ್,ಡಾ.ಪ್ರದೀಪ ಕುಮಾರ್,ಶ್ರೀಮತಿ ಸುಮಿತ್ರಾ, ಅತಿಥಿ ಉಪನ್ಯಾಸಕಿಯರಾದ,ವಿದ್ಯಾ ಜಂಗೀನ, ಸುಷ್ಮಾ ದೇಶಪಾಂಡೆ ಇತರರು ಇದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಗಣಪತಿ,ಕೆ.ಲಮಾಣಿ ಅವರು ವಹಿಸಿದ್ದರು.
ಇದೇ ಸಂದರ್ಭದಲ್ಲಿ ಪತ್ರಿಕೋದ್ಯಮ ವಿಭಾಗದಿಂದ ಮಹಿಳಾ ಟೈಮ್ಸ್ ಪತ್ರಿಕೆ ಬಿಡುಗಡೆಯಾಯಿತು.ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರಾದ ಶಿವಪ್ಪ ಬಡಿಗೇರ,ಶಿವಪ್ರಸಾದ್ ಹಾದಿಮನಿ,ಉಮೇಶ್ ಕಾತರಕಿ ಮಲ್ಲಿಕಾರ್ಜುನ ಮಡಿವಾಳರ,ಹುಚ್ಚಪ್ಪ ಬೊಮ್ನಾಳ,ಡಾ.ಸೂರಪ್ಪ,ವಿರುಪಾಕ್ಷಪ್ಪ ಮುತ್ತಾಳ ಇತರರು ಉಪಸ್ಥಿತರಿದ್ದರು.
ಡಾ.ಪ್ರದೀಪ ಕುಮಾರ್ ಅವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ