ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೇಜ್ರಿವಾಲ್ ಬಂಧನ ಖಂಡನೀಯ

ಚಾಮರಾಜನಗರ:ಕೇಂದ್ರಸರ್ಕಾರ ಸರ್ವಾಧಿಕಾರಿ ಧೋರಣೆಅನುಸರಿಸುತ್ತಿದೆ.ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರವಾಲ್ ಅವರ ಬಂಧನ ಇದಕ್ಕೆ ಸಾಕ್ಷಿಯಾಗಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಆಕ್ರೋಶವ್ಯಕ್ತಪಡಿಸಿದರು.’ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆಬಂದ ದಿನದಿಂದ ವಿರೋಧಪಕ್ಷಗಳನ್ನು ತುಳಿಯುವ ಕೆಲಸಮಾಡುತ್ತಿದೆ.ಭ್ರಷ್ಟಾಚಾರ ಸಹಮಿತಿ ಮೀರಿದೆ ಈ ಮೂಲಕ ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.“ಅಂಬೇಡ್ಕರ್,ಮಹಾತ್ಮಗಾಂಧಿ ಚಿಂತನೆಯಲ್ಲಿ ಅರವಿಂದ ಕೇಜಿವಾಲ್ ಅಡಳಿತ ನಡೆಸುತ್ತಿದ್ದಾರೆ.ಅಬಕಾರಿ ನೀತಿಹಗರಣದ ಜೊತೆ ನಂಟಿರುವ ಹಣಅಕ್ರಮ ವರ್ಗಾವಣೆ ಆರೋಪದಲ್ಲಿಜಾರಿ ನಿರ್ದೇಶನಾಲಯದ (ಇ.ಡಿ)ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿರುವುದು ಖಂಡನೀಯ.ಇದು ಸಂವಿಧಾನದ ಕಗ್ಗೊಲೆ ಎಂದರು.
‘ಬಿಜೆಪಿಯವರು ತಮಗೆ ಅನುಕೂಲವಾಗುವಂತೆ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿದ್ದಾರೆ. ದಾವೂದ್ ಇಬ್ರಾಹಿಂ ರೀತಿ ಕಂಪನಿಗಳಿಂದ ಹಫ್ತಾ ವಸೂಲಿ ಮಾಡಲಾಗುತ್ತಿದೆ.ಹಿಂದುಳಿದ ಸಮುದಾಯಗಳನ್ನು ಕೇವಲ ಮತಕ್ಕಾಗಿ ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದುಆರೋಪಿಸಿದರು.’ರಾಮನ ಧ್ಯಾನ ಮಾಡುವ ಇವರು ರಾಮನ ಚಿಂತನೆಗಳನ್ನು ಮಾತ್ರ ಅಳವಡಿಸಿಕೊಂಡಿಲ್ಲ.ಸರ್ಕಾರ ಸರಿದಾರಿಯಲ್ಲಿ ನಡೆಯಬೇಕಾದರೆ ವಿರೋಧಪಕ್ಷ ಬೇಕು.ಆದರೆ ವಿರೋಧಪಕ್ಷ ಇಲ್ಲದಂತೆ ಮಾಡಲು ಬಿಜೆಪಿ ಮುಂದಾಗಿದೆ ಎಂದರು.ಪಕ್ಷದ ಮುಖಂಡರಾದ ಮಹದೇವ್ ಪ್ರದಾಸ್,ಮಹದೇವ ಸ್ವಾಮಿ,ರವಿ,ನಾಗೇಶ್ ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ