ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿವಿಧ ಬೇಡಿಕೆ ಈಡೇರಿಕೆಗಾಗಿ ಲೋಕಸಭೆ ಚುನಾವಣೆ ಬಹಿಷ್ಕಾರದ ಪೂರ್ವ ಭಾವಿ ಸಭೆ

ಗದಗ ಇಲ್ಲಿಯ ಸಮಿಪದ ತಿಮ್ಮಾಪೂರ ಗ್ರಾಮದ ಶ್ರೀ ಕರಿಯಮ್ಮ ದೇವಿ ಸಮುದಾಯ ಭವನದಲ್ಲಿ ಗ್ರಾಮದ ವಿವಿಧ ಬೇಡಿಕೆಗಳ ಈಡೇರಿಕೆಗೆ ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡುವ ಕುರಿತು ಪೂರ್ವ ಭಾವಿ ಸಭೆಯನ್ನು ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಸ‌ದಸ್ಯರು ಜಂಟಿಯಾಗಿ ಸಭೆ ನಡೆಯಿತು.
ತಿಮ್ಮಾಪೂರ ಗ್ರಾಮದಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳಾದ
ತಿಮ್ಮಾಪೂರ ಗ್ರಾಮದಿಂದ ಕೋಟುಮಚಿಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ ಹಾಗೂ ಕಾಣೆಹಳ್ಳಕ್ಕೆ ಮೇಲು ಸೇತುವೆ ನಿರ್ಮಾಣ ಮಾಡುವುದು.
ತಿಮ್ಮಾಪೂರ ಗ್ರಾಮದಿಂದ ಸೋಂಪೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ.
ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡುವುದು.ನೂತನ ರಾಷ್ಟ್ರೀಕೃತ ಬ್ಯಾಂಕ್ ಶಾಖೆ ತೆರೆಯುವದು.ಕುಡಿಯುವ ನೀರಿನ ಯೋಜನೆಯಾದ ಜಿ ಜಿ ಎಂ ಕಾಮಗಾರಿಯಿಂದ ಹೊಡೆದು ಹಾಕಿದ ರಸ್ತೆ ದುರಸ್ತಿ ಮಾಡಿ ನೀರು ಪೂರೈಕೆ ಮಾಡುವುದು.
ಮಹಿಳೆಯರಿಗೆ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡುವುದು.ಹರ್ಲಾಪೂರ ಹಾಗೂ ಹಳ್ಳಿಗುಡಿ ರಸ್ತೆ ಡಾಂಬರೀಕರಣ ಮಾಡುವುದು
ರೈತರು ತಮ್ಮ ಕೃಷಿ ಜಮೀನುಗಳಿಗೆ ಹೋಗುವ ದಾರಿಯನ್ನು ದುರಸ್ತಿ ಮಾಡುವುದು.
ಎಂ ಎಸ್ ಆಯಿಲ್ ಬಾರ್ ಬೇರೆ ಕಡೆಗೆ ಸ್ಥಳಾಂತರ ಮಾಡುವ ಕುರಿತು ‌ಹಾಗೂ ಚುನಾವಣೆ ಬಹಿಷ್ಕಾರದ ಬ್ಯಾನರ್ ಅನ್ನು ಹಾಕಿ ಯಾವುದೇ ರಾಜಕಾರಣಿಗಳಿಗೆ ಪ್ರವೇಶ ಇಲ್ಲ ಎಂದು ದಿನಾಂಕ 27-03-2024 ರ ಬುಧವಾರ ಗ್ರಾಮದ ಬಸ್ ನಿಲ್ದಾಣದ ಬಳಿ ರಸ್ತೆ ತಡೆದ್ದು ಪ್ರತಿಭಟನೆ ನಡೆಸಲು ಸಭೆಯಲ್ಲಿ ಒಮ್ಮತದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.
ಈ ಸಭೆಯ ಅಧ್ಯಕ್ಷತೆಯನ್ನು ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ಹುಚ್ಚೀರಪ್ಪ ಜೋಗಿನ ವಹಿಸಿದ್ದರು.
ಈ ಸಂದರ್ಭದಲ್ಲಿ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್ ಬಾಬರಿ,ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನೀಲ್ಲಪ್ಪ ಗಾಜಿ,ಶರಣಪ್ಪ ಜೋಗಿನ,ಮಹೇಶ ಗಾಜಿ,ಬಾಳಪ್ಪ ಗಂಗರಾತ್ರಿ,ಮಲ್ಲಪ್ಪ ಮಾಳಗೋಂಡರ, ರಾಮಪ್ಪ ಗಾಣದ,ಗಿರೀಶ ಗುಡ್ಲಾನೂರ,ರಾಮಪ್ಪ ಹಚ್ಚಪ್ಪನವರ,ಶಶಿ ಲಕ್ಕುಂಡಿ,ಯಲ್ಲಪ್ಪ ಶಿಗರಗಡ್ಡಿ, ರಮೇಶ ಜೋಗಿನ,ಭೀಮಪ್ಪ ಕಂಕರಿ,ಶೇಖಪ್ಪ ಜೋಗಿನ,ಹನುಮಪ್ಪ ಕೊಪ್ಪಳ,ಮಹಿಳಾ ಸಂಘದ ಸದಸ್ಯರಾದ ಸೀತಾ ಜೋಗಿನ,‌ಸಾವಿತ್ರಿ ಕೊಪ್ಪದ,ಅನುಸವ್ವ ಗುಡ್ಲಾನೂರ,ಹನುಮವ್ವ ತಳವಾರ,ವಿಜಯಲಕ್ಷ್ಮೀ ಜೋಗಿನ,ಶಾಂತವ್ವ ಹಳ್ಳಿಕೇರಿ ಇನ್ನೂ ಮುಂತಾದವರು ಹಾಜರಿದ್ದು
ಈ ಎಲ್ಲಾ ಮೇಲೆ ಬೇಡಿಕೆಗಳನ್ನು ಹಲವಾರು ಬಾರಿ ಲೋಕಸಭಾ ಸಂಸದರಿಗೆ ಹಾಗೂ ಸಂಭಂದಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಆದ ಕಾರಣ ಲೋಕಸಭಾ ಚುನಾವಣೆಯನ್ನು ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಮಹಿಳಾ ಗ್ರಾಮ ಘಟಕದ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷರು ಹಾಗೂ ಅನೇಕ ಸಂಘಟನೆಗಳು ಮತ್ತು ಮಹಿಳಾ ಸಂಘದ ಸದಸ್ಯರು ಯುವಕರು ಹಾಗೂ ಗ್ರಾಮಸ್ಥರಿಂದ ಗ್ರಾಮದ ಬಸ್ ನಿಲ್ದಾಣದ ಬಳಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ