ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಲ್ಲರೂ ಒಗ್ಗಟ್ಟಾಗಿ ಸಮಸ್ಯೆ ಬಗೆಹರಿಸಬೇಕು:ದೊಡ್ಡಿ ಇಂದವಾಡಿ ಸಿದ್ದರಾಜು

ಹನೂರು ಸಮುದಾಯದ ಭವನ ನಿರ್ಮಾಣಕ್ಕೆ ತೊಂದರೆ ಉಂಟಾದಲ್ಲಿ ಎಲ್ಲರೂ ಒಗ್ಗಟ್ಟಾಗಿ ಸಮಸ್ಯೆ ಬಗೆಹರಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮೈಸೂರು ವಿಭಾಗೀಯ ದೊಡ್ಡಿ ಇಂದವಾಡಿ ಸಿದ್ದರಾಜು ತಿಳಿಸಿದರು.

ಬೆಂಗಳೂರಿನಲ್ಲಿ ನಡೆಯುವ ಚೌಡರ ಕೆರೆ ನೆನಪಿನಾರ್ಥವಾಗಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ನಡೆಯುವ ಸಮಾವೇಶಕ್ಕೆ ತೆರಳುವ ಉದ್ದೇಶದಿಂದ ಹನೂರು ಪಟ್ಟಣದ ಆರ್ ಎಂ ಸಿ ಆವರಣದಲ್ಲಿ ಪೂರ್ವ ಬಾವಿ ಸಭೆಯಲ್ಲಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ನಮ್ಮ ಸಂಘಟನೆ ವತಿಯಿಂದ ನೆಡೆಯುತ್ತಿರುವ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಚೌಡರ ಕೆರೆ ನೀರನ್ನು ತಮ್ಮ ಅಪಾರ ಅನುಯಾಯಿಗಳ ಜೊತೆಗೆ ನೀರನ್ನು ಕುಡಿದ ನೆನಪಿನಾರ್ಥವಾಗಿ ಕಾರ್ಯಕ್ರಮಕ್ಕೆ ದಯಮಾಡಿ ಎಲ್ಲರೂ ಸ್ವ-ಇಚ್ಛೆಯಿಂದ ಬರಬೇಕು ಹಾಗೂ ಹೆಚ್ಚಿನ ರೀತಿಯಲ್ಲಿ ನಿಮ್ಮ ಜೊತೆ ಆಸಕ್ತರನ್ನು ಕರೆದುಕೊಂಡು ಬರಬೇಕು ಎಂದರು ನಮ್ಮ ಸಮುದಾಯದ ಹಿತ ದೃಷ್ಟಿಯಿಂದ ನಾವು ಜಾಗೃತಿ ಆಗುತ್ತಿರುವುದು ಸಂತೋಷದ ವಿಷಯ ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟನೆ ಆಗಬೇಕಾಗಿದೆ ಗ್ರಾಮ ಮಟ್ಟದಲ್ಲಿ ಶಾಖೆಗಳನ್ನು ತೆರೆದು ಪಧಾಧಿಕಾರಿಗಳನ್ನು ಆಯ್ಕೆ ಮಾಡಬೇಕು,ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೆಲಸ ಮಾಡಬೇಕು ಎಂದರು ನಮ್ಮ ಭಾಗದ ಕೊತ್ತನೂರು ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯದ ನಿರ್ಮಾಣಕ್ಕೆ ಕೆಲವು ಅಡೆತಡೆಗಳು ಇದ್ದು ಅವುಗಳನ್ನು ನಿವಾರಣೆ ಮಾಡಬೇಕು ದೇವಸ್ಥಾನ ನಿರ್ಮಾಣಕ್ಕೆ ಕೊಡುವ ಆಸಕ್ತಿಯನ್ನು ಸಮುದಾಯದ ಭವನ ನಿರ್ಮಾಣ ಮಾಡುವುದಕ್ಕೆ ಕೊಡುತ್ತಿಲ್ಲ ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದಕ್ಕೆ ಸಿದ್ದರಾಗಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ವೀರ,ಹನೂರು ತಾಲ್ಲೂಕು ಸಂಚಾಲಕ ಮಾದೇಶ್ ಬೈರಾನಾಥ್,ಕೊಳ್ಳೇಗಾಲ ತಾಲ್ಲೂಕು ಸಂಚಾಲಕ ಶಿವಸ್ವಾಮಿ,ಜಿಲ್ಲಾ ಸಂಘಟನೆ ಸಂಚಾಲಕ ಹನೂರು ನಾಗರಾಜು,ಮಂಬಳ್ಳಿ ಹಿಂಡಿಗಯ್ಯ,ಕೊತ್ತನೂರು ಚಿಕ್ಕ ದೊಡ್ಡಯ್ಯ,ಭಾಗ್ಯಮ್ಮ,ಮರಿಯಮ್ಮ,ಚಿಕ್ಕತಾಯಮ್ಮ, ಹಾಗೂ ಇನ್ನಿತರರು ಇದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ