ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಟ್ಟಡ ಕಾರ್ಮಿಕರ ಜೀವಗಳಿಗೆ ಬೆಲೆ ಇಲ್ಲದಂತಾಗಿದೆ ಕೂಡಲೇ ಸರ್ಕಾರ ಬಡ ಕೂಲಿ ಕಾರ್ಮಿಕರಿಗೆ ಫ್ರೀ ವಿಮಾ ಸೌಲಭ್ಯ ಜಾರಿಗೆ ತರಲಿ ಚಂದ್ರಕಾಂತ್ ಸರ್ಕಾರಕ್ಕೆ ಆಗ್ರಹ

ಬೆಂಗಳೂರು ನಗರದ ಕೆಂಗೇರಿಯ ಹೊಯ್ಸಳ ಸರ್ಕಲ್ ನಲ್ಲಿ ಕಟ್ಟಡ ಕಾರ್ಮಿಕ ಹನುಮಂತ ರಾಯಪ್ಪ ಅವರು ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ಕೊಟ್ಟು ನಮ್ಮ ಕರ್ನಾಟಕ ಸೇನೆ ಕಟ್ಟಡ ಕಾರ್ಮಿಕ ಘಟಕದ ಅಧ್ಯಕ್ಷರಾದ ಚಂದ್ರಕಾಂತ್ ಅವರು ಕುಟುಂಬದವರಿಗೆ ಸಾಂತ್ವಾನ ಹೇಳಿದರು ಅಲ್ಲದೆ ಸರಕಾರದ ವಿರುದ್ಧ ಕಿಡಿಕಾರಿದರು ಬೆಂಗಳೂರಿನ ನಗರದಲ್ಲಿ ಹಾಗೂ ಹಲವಾರು ಕಡೆಗಳಲ್ಲಿ ಕಟ್ಟಡ ಕಾರ್ಮಿಕರು ಯಾವುದೇ ಸುರಕ್ಷಾ ಕವಚಗಳಲ್ಲದೆ ಅಥವಾ ಮೆಟಲ್ ಬೆಲ್ಟ್ ಇಲ್ಲದೆ ಕೆಲಸ ಮಾಡುತ್ತಿದ್ದಾರೆ ಹಾಗೂ ಆಯ ತಪ್ಪಿ ಕೆಳಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಕಟ್ಟಡದ ಮಾಲೀಕರು ಅಸ್ಟೋ ಇಷ್ಟೋ ದುಡ್ಡು ಕೊಟ್ಟು ಕೈ ತೊಳೆದುಕೊಳ್ಳುತ್ತಿದ್ದಾರೆ ಆದ್ದರಿಂದ ಕಟ್ಟಡದ ಕಾರ್ಮಿಕರ ಜೀವಗಳಿಗೆ ಬೆಲೆ ಇಲ್ಲದಂತಾಗಿದೆ ಕಟ್ಟಡ ಕಾರ್ಮಿಕರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳಿದೆ ಕಟ್ಟಡ ಕಾರ್ಮಿಕರ ಬಗ್ಗೆ ಕಾಳಜಿ ಇದ್ದರೆ ಕಟ್ಟಡ ಕಾರ್ಮಿಕರ ಪರವಾಗಿ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ಜಾರಿಗೆ ತರಬೇಕು ಈಗಾಗಲೇ ಮೃತಪಟ್ಟ ಕಟ್ಟಡ ಕಾರ್ಮಿಕ ಹನುಮಂತರಾಯಪ್ಪನವರಿಗೆ 20 ಲಕ್ಷ ರೂಪಾಯಿ ಪರಿಹಾರ ಧನ ಕೊಡಬೇಕು ಮತ್ತು ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮಾಸಿಕ ವೇತನ ಹಾಗೂ ಕಾರ್ಮಿಕರ ಪಿಂಚಣಿ ಯೋಜನೆಯನ್ನು ಸರ್ಕಾರ ಜಾರಿಗೆ ತರಬೇಕು ಈಗಾಗಲೇ ಹಲವಾರು ವರ್ಷಗಳಿಂದ ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆಯನ್ನು ಜಾರಿಗೆ ತಂದಿದೆ ಕಾರ್ಮಿಕ ಇಲಾಖೆಯವರು ನಿದ್ದೆ ಮಾಡುತ್ತಿದ್ದಾರೆಯೋ ಗೊತ್ತಿಲ್ಲ ಈಗಾಗಲೇ ಕಟ್ಟಡ ಕಾರ್ಮಿಕರ ಲೇಬರ್ ಕಾರ್ಡುಗಳನ್ನು ಹಂಚಲಾಗಿದೆ ನಿಜವಾದ ಕಟ್ಟಡ ಕಾರ್ಮಿಕರಿಗೆ ಲೇಬರ್ ಕಾರ್ಡ್ ತಲುಪದಿರುವುದು ದುರದೃಷ್ಟಕರ ಸಂಗತಿ ಅದೇ ರೀತಿಯಾಗಿ ನಕಲಿ ಲೇಬರ್ ಕಾರ್ಡುಗಳನ್ನು ರದ್ದುಪಡಿಸಬೇಕು ನಿಜವಾದ ಫಲಾನುಭವಿಗಳಿಗೆ ಲೇಬರ್ ಕಾರ್ಡ್ ವಿತರಿಸಬೇಕು ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಬೆಂಗಳೂರು ನಗರದ ಕಟ್ಟಡ ಕಾರ್ಮಿಕರ ಕಚೇರಿಗೆ ಮುಂದೆ ಬರುವಂತಹ ದಿನಗಳಲ್ಲಿ ಕಾರ್ಯಕರ್ತರೊಂದಿಗೆ ಚರ್ಚಿಸಿ ಮುತ್ತಿಗೆ ಹಾಕಲಾಗುವುದು ಅದೇ ರೀತಿಯಾಗಿ ಈ ಕೂಡಲೇ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ಜಾರಿಗೆ ತಂದು ಪ್ರತಿಯೊಬ್ಬ ಕಟ್ಟಡ ಕಾರ್ಮಿಕರಿಗೆ ನ್ಯಾಯ ಒದಗಿಸಿ ಕೊಡಬೇಕು ದಶಕಗಳಿಂದ ನೆನಗುದಿಗೆ ಬಿದ್ದ ಕಾರ್ಮಿಕರ ಬೇಡಿಕೆಗಳನ್ನು ಜಾರಿಗೆ ತರಬೇಕು ಎಂದು ನಮ್ಮ ಕರ್ನಾಟಕ ಸೇನಾ ಕಟ್ಟಡ ಕಾರ್ಮಿಕರ ಬೆಂಗಳೂರು ನಗರದ ಘಟಕದ ಅಧ್ಯಕ್ಷರಾದ ಚಂದ್ರಕಾಂತ್ ಅವರು ಸರ್ಕಾರಕ್ಕೆ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ