ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪದಾಧಿಕಾರಿಗಳ ಆಯ್ಕೆ

ಹಾವೇರಿ:ರಟ್ಟೀಹಳ್ಳಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಯ ತಾಲೂಕಾ ಘಟಕದ ಪದಾಧಿಕಾರಿಗಳನ್ನು ಇಂದು ಶ್ರೀ ಧರ್ಮಗಿರಿ ಬಾರಾಮಹಲ್ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.ಇದೇ ಸಂಧರ್ಭದಲ್ಲಿ ಅನೇಕ ಹೊಸ ಸದಸ್ಯರು ಸಂಘಟನೆಯ ಕಾರ್ಯವೈಖರಿಯನ್ನು ಮೆಚ್ಚಿ ಸ್ವ-ಸಂತೋಷದಿಂದ ಸಂಘಟನೆಗೆ ಸೇರಿಕೊಂಡರು. ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ರಟ್ಟೀಹಳ್ಳಿ ತಾಲೂಕಾಧ್ಯಕ್ಷರಾಗಿ ಶ್ರೀವಿಠ್ಠಲ್ ನಾಮದೇವ, ಗೌರವಾಧ್ಯಕ್ಷರಾಗಿ ಶ್ರೀರಾಘವೇಂದ್ರ ತಿಪ್ಪಣ್ಣನವರ, ತಾಲೂಕಾ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಸಂತೋಷ ಎಂ.ಎಂ.,ತಾಲೂಕಾ ಯುವ ಘಟಕದ ಅಧ್ಯಕ್ಷರಾಗಿ ಶ್ರೀಮನೋಜ ನಡುವಿನಮನಿ ರಟ್ಟೀಹಳ್ಳಿ ಮತ್ತು ಹಿರೇಕೆರೂರ ತಾಲೂಕು ಕಾನೂನು ಸಲಹೆಗಾರರಾಗಿ ಶ್ರೀ ಶಂಕರ ಇಟಗಿ ತಾಲೂಕಾ ಮಾಧ್ಯಮ ಘಟಕದ ಅಧ್ಯಕ್ಷರಾಗಿ ಶ್ರೀ ಸಂತೋಷಕುಮಾರ ಪವಾರ,ತಾಲೂಕಾ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಶ್ರೀ ರುದ್ರೇಶ್ ಹೊಳಜೋಗಿ ಇವರನ್ನು ಆಯ್ಕೆ ಮಾಡಿ,ಸನ್ಮಾನಿಸಿ,ನಾಡು ನುಡಿ ಸೇವೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಷಯವೆಂದು ಜಿಲ್ಲಾಧ್ಯಕ್ಷರಾದ ಶ್ರೀಹನುಮಂತ ಭೋವಿ ಹೇಳಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳು,ಸಂಘಟನೆಯ ಅನೇಕ ಸದಸ್ಯರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ