ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಮಸ್ಯೆಗಳ ಪರಿಹಾರಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ

ಸಿರುಗುಪ್ಪ:ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ಕರ್ನಾಟಕ ರಾಜ್ಯಗ್ರಾಮ ಪಂಚಾಯತಿ ಸದಸ್ಯರು ಮಹಾ ಒಕ್ಕೂಟದ ರಾಜ್ಯ ಉಪಾಧ್ಯಕ್ಷರು ಪಂಪಯ್ಯ ಹಾಗೂ ಸಿರುಗುಪ್ಪ ತಾಲೂಕು ಅಧ್ಯಕ್ಷರಾದ ಪಂಪಯ್ಯ ಮತ್ತು ಇತರ ಪದಾಧಿಕಾರಿಗಳು ಹಚ್ಚೋಳಿ ರಾಜಕುಮಾರ್, ಉತ್ತೂರು ವೀರನಗೌಡ,ತಾಲೂಕು ಒಕ್ಕೂಟದ ಉಪಾಧ್ಯಕ್ಷರಾದ ಬಲಕುಂದಿ ಗ್ರಾಮ ಪಂಚಾಯತಿಯ ಅಧ್ಯಕ್ಷರು ಸುನೀತ ರುದ್ರಮುನಿ ಸ್ವಾಮಿ ಹಾಗೂ ಬಾಗೇವಾಡಿ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾದ ಸಣ್ಣ ರಾಮಯ್ಯ ಹಾಗೂ ಸದಸ್ಯರು ಸರ್ಕಾರವನ್ನು ಎಚ್ಚರಿಸಿದರು.ಇಂದು ರಾಜ್ಯ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮೀಣ ಪ್ರಾಂತ್ಯಗಳ ಸಮಸ್ಯೆಗಳು ಮತ್ತು ಗ್ರಾಮಗಳ ಅಭಿವೃದ್ಧಿಗಾಗಿ ಅಧಿಕಾರಿಗಳನ್ನು ಜೊತೆಗೂಡಿಸಿಕೊಂಡು ಶ್ರಮಿಸುತ್ತಿರುವದಾಗಿ ತಿಳಿಸಿದರು.ಸರ್ಕಾರದ ಎಲ್ಲಾ ಯೋಜನೆಗಳನ್ನು ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಅಧಿಕಾರಿಗಳ ಜೊತೆಗೆ ಹಳ್ಳಿಗಳಲ್ಲಿ ಸೇವೆ ಮಾಡುತ್ತಿದ್ದಾರೆ
ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಮಹಿಳಾ ಸದಸ್ಯರನ್ನು ಕಡಿಗಣಿಸಿದ್ದಾರೆ
ಹಾಗೂ ನಿರ್ಲಕ್ಷ್ಮವಾಗಿ ಅಸಂವಿಧಾನಿಕವಾಗಿ ಪದ ಬಳಕೆ ಮಾಡುತ್ತಿದ್ದಾರೆ ಮತ್ತು ಅಧಿಕಾರ ದುರ್ಬಳಕೆ ಮಾಡಿಕೊಂಡು ಚಿಟಿಕೆ ಹೊಡೆಯುವುದರ ಮುಖಾಂತರ ಗೂಂಡಾ ವರ್ತನೆ ಮಾಡಿರುವುದು ಖಂಡನೀಯ ಎಂದು ಹೇಳಿದ್ದಾರೆ ಇದಕ್ಕೆ ಉದಾಹರಣೆಯಾಗಿ ಚಿಕ್ಕಬಳ್ಳಾಪುರ ಜಿಲ್ಲಾ
ಶಿಡ್ಲಘಟ್ಟ ತಾಲೂಕು ಜೆ ವೆಂಕಟಪುರ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಗಳಲ್ಲಿ ಮಹಿಳಾ ಸದಸ್ಯರನ್ನು ನಿರ್ಲಕ್ಷಿಸಿರುವುದಲ್ಲದೆ ಸಾಮಾನ್ಯ ಸಭೆಗೆ ಗೈರಿ ಹಾಜರು ಎಂದು ಸುಳ್ಳು ಆರೋಪ ಮಾಡಿರುತ್ತಾರೆ ಅದೇ ಸಂದರ್ಭದಲ್ಲಿ ಪಂಚಾಯಿತಿಯ ಮುಂದೆ ಧರಣಿ ಕೂತಿರುವ ಮಹಿಳಾ ಸದಸ್ಯರಿಗೆ ಸುಳ್ಳು ಭರವಸೆ ನೀಡುವುದರ ಮುಖಾಂತರ ಸಮಾಧಾನಪಡಿಸಿರುತ್ತಾರೆ ಹೊರತು ನ್ಯಾಯ ಕೊಡಿಸಿರುವುದಿಲ್ಲ ಮಹಿಳಾ ಸದಸ್ಯೆ ಶಶಿಕಲಾ ಅಂಬರೀಶ್ ರವರ ಬಳಿ ಅಧಿಕಾರಿಗಳು ವರ್ತಿಸಿದ ವಿಧಾನ ಸರಿಯಲ್ಲ ಅಲ್ಲಿನ ಪಿಡಿಒ,ಅವರ ಪ್ರಶ್ನೆಗಳಿಗೆ ಸಾಮಾನ್ಯ ಸಭೆಯಲ್ಲಿ ಸರಿಯಾದ ಉತ್ತರ ನೀಡದೆ ಕರ್ತವ್ಯಲೋಪ ಮಾಡಿರುತ್ತಾರೆ ಈಗಾಗಲೇ ಈ ವಿಷಯಕ್ಕೆ ಸಂಬಂಧಪಟ್ಟ ಹಾಗೆ ನಮ್ಮ ಕರ್ನಾಟಕ ರಾಜ್ಯ ಒಕ್ಕೂಟದ ವತಿಯಿಂದ ಪಂಚಾಯತ್ ರಾಜ್ ಆಯುಕ್ತರಾದ ಶ್ರೀಮತಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ದೂರು ನೀಡಲಾಗಿದೆ ಎಂದರು.ರಾಜ್ಯ ಸರ್ಕಾರವು ಕೂಡಲೇ ಈ ವಿಷಯದ ಮೇಲೆ ಗಮನಹರಿಸಿ,ಸಂಬಂಧಿತ ಪಿಡಿಒ ಅವರನ್ನು ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮವಹಿಸಿ, ಸದಸ್ಯರಿಗೆ ನ್ಯಾಯ ಕೊಡಿಸದಿದ್ದರೆ ರಾಜ್ಯಾದ್ಯಂತ ತಮ್ಮ ಒಕ್ಕೂಟದ ನೇತೃತ್ವದಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ಸಮಾಜದ ಅಭಿವೃದ್ಧಿಯ ಗೌರವಕ್ಕಾಗಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತಿ ಮಹಿಳಾ ಸದಸ್ಯರನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಈ ರೀತಿ ನಿರ್ಲಕ್ಷ ಭಾವದಿಂದ ನೋಡಿದರೆ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅವಕಾಶ ಇರುವುದರಿಂದ ಮಾನ್ಯ ಪಂಚಾಯತ್ ರಾಜ್ ಸಚಿವರು ಹಾಗೂ ಸಂಬಂಧಿತ ಇಲಾಖೆ ಅಧಿಕಾರಿಗಳು. ಗ್ರಾಮ ಪಂಚಾಯತಿ ಸದಸ್ಯರ ಹಕ್ಕುಗಳ ರಕ್ಷಣಾ ಮತ್ತು ಉತ್ತಮ ಆಡಳಿತಕ್ಕಾಗಿ ಕ್ರಮವಹಿಸಲು ಈ ಮೂಲಕ ಮನವಿ ಮಾಡುತ್ತಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ