ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಗತಿಪರ-ಜನಪರ ಸರ್ಕಾರವನ್ನು ದೇಶದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಳ ಮಟ್ಟದಲ್ಲಿ ಶ್ರಮಿಸಬೇಕು – ಶಾಸಕ ಡಾ.ಶ್ರೀನಿವಾಸ್.ಎನ್. ಟಿ.‌

ಕೂಡ್ಲಿಗಿ ಕ್ಷೇತ್ರದ ಖಾನಹೊಸಹಳ್ಳಿ ಗ್ರಾಮದ ಗಾಣಿಗರ ಸಮುದಾಯ ಭವನದಲ್ಲಿ ದಿ. 01-04-24 ರಂದು “ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರ” – ಪೂರ್ವಭಾವಿ ಸಭೆ ಮಾನ್ಯಶಾಸಕರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಲ್ಲಿ ಕಟ್ಟಲು ಬೂತ್ ಮಟ್ಟದ ಪ್ರತಿಯೊಬ್ಬ ಕಾರ್ಯಕರ್ತರ ಸಮಸ್ಯೆ – ಸವಾಲುಗಳನ್ನು ಆಲಿಸಿದರು.‌ ಲೋಕಸಭಾ ಚುನಾವಣೆಯ ಸಿದ್ಧತೆಗಾಗಿ ನಮ್ಮ ಪಕ್ಷದ ಕಾರ್ಯ ಚಟುವಟಿಕೆಗಳು ಹೇಗೆ ಇರಬೇಕು. ಕಾಂಗ್ರೆಸ್ ಪಕ್ಷವನ್ನು ಮುಂದೆ ಹೇಗೆ ಕೊಂಡೈಯ್ಯಬಹುದು ಎಂಬುದನ್ನು ಶಾಸಕರು ಪ್ರತಿಯೊಬ್ಬರ ನೋವುಗಳನ್ನು ಅರಿತುಕೊಂಡರು. ಕಾಂಗ್ರೆಸ್ ಪಕ್ಷ ದೇಶದ ಅಭಿವೃದ್ಧಿಗಾಗಿ ರೂಪಿಸಿದ ಜನಪರ, ಪ್ರಗತಿಪರ ಮತ್ತು ಸಂವಿಧಾನ ಪರವಾದ ಕಾರ್ಯಕ್ರಮಗಳನ್ನು ಹಾಗೂ ಕರ್ನಾಟಕ ಘನ ಸರ್ಕಾರವು ಯಶಸ್ವಿಯಾಗಿ ಮುನ್ನಡೆಸುವ ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬರು ಮನೆ ಮನೆಗೆ ಸುದ್ದಿ ಮುಟ್ಟಿಸಬೇಕು. ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಈ .ತುಕಾರಾಂ ಅವರ ಗೆಲುವುಗಾಗಿ ಸಹಕಾರ ಕೊಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಂಘಟನೆಯ ಮನೋಭಾವನೆಯಿಂದ ಮತ ಕೇಳಬೇಕು ಎಂದೂ ಪಕ್ಷದ ಕಾರ್ಯಕರ್ತರಲ್ಲಿ ಶಾಸಕರು ಮನವಿ ಮಾಡಿಕೊಂಡರು. ‌ಈ ವೇಳೆ ಹೊಸಹಳ್ಳಿ ಬ್ಲಾಕ್ ಸಮಿತಿಯ ಪದಾಧಿಕಾರಿಗಳು, ವಿವಿಧ ಮುಖಂಡರು, ಸಹಸ್ರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಅಂಗಡಿ ಶಶಿಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ