ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೀಳವಾರ್ ಗ್ರಾಮದಲ್ಲಿ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬೀಳವಾರ ಗ್ರಾಮದಲ್ಲಿ ಡಾ.ಬಾಬು ಜಗಜೀವನ್ ರಾಮ್ ಜಯಂತಿಯ ಕಾರ್ಯಕ್ರಮ ಆಚರಿಸಲಾಯಿತು.ಈ ಸಂದರ್ಭದಲ್ಲಿ ಜೇವರ್ಗಿ ತಾಲೂಕ ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಗೊಲ್ಲಾಳಪ್ಪ ಮ್ಯಾಗೇರಿ ಅವರು ಕಾರ್ಯಕ್ರಮದ ಕುರಿತು ಸುಧೀರ್ಘವಾಗಿ ಮಾತನಾಡಿದರು ದೇಶದ ಮಾಜಿ ಉಪ ಪ್ರಧಾನಿಯಾದ ಡಾ.ಬಾಬು ಜಗಜೀವನ್ ರಾಮ್ ಹಸಿರು ಕ್ರಾಂತಿಯ ಮೂಲಕ ಬಡ ಜನರ ಹಸಿವು ನೀಗಿಸಿದ ಮಹಾನ್ ಮುತ್ಸದ್ದಿ ಹಾಗೂ ಸ್ವತಂತ್ರ ಹೋರಾಟಗಾರರು ಮತ್ತು ದೇಶದಲ್ಲಿ ಬಾಬೂಜಿ ಎನ್ನುವ ಹೆಸರಿನಿಂದ ಖ್ಯಾತರಾಗಿ ದೇಶಕ್ಕೆ ಇವರು ನೀಡಿದ ಕೊಡುಗೆ ಅಪಾರವಾಗಿದ್ದು ಬಾಬುಜಿಯವರ ಆದರ್ಶ ಚಿಂತನೆಗಳು ಇಂದಿಗೂ ದಾರಿದೀಪವಾಗಿವೆ ಶೋಷಿತರ ಪರವಾಗಿ ಡಾ.ಬಾಬು ಜಗಜೀವನ್ ರಾಮ್ ಅವರು ನಡೆಸಿದ ಹೋರಾಟ ಸ್ಮರಣಿಯವಾಗಿದ್ದು ಇಂದಿನ ಯುವ ಜನಾಂಗ ಡಾ.ಬಾಬು ಜಗಜೀವನ್ ರಾಮ್ ಅವರ ಆದರ್ಶ ಚಿಂತನೆಗಳನ್ನು ಪ್ರತಿಯೊಬ್ಬರು ತಮ್ಮ ನಿಜ ಜೀವನದಲ್ಲಿ ಮೈಗೂಡಿಸೀಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಮಾತನಾಡಿದರು ಹಾಗೂ ಈ ಕಾರ್ಯಕ್ರಮದಲ್ಲಿ ಶೇಖಪ್ಪ ತಳಗೇರಿ ಜೇವರ್ಗಿ ತಾಲೂಕ ಪಂಚಾಯತ್ ಸದಸ್ಯರು ಹಾಗೂ ಹಾಲುಮತ ಸಮಾಜದ ಯುವ ಮುಖಂಡರು ಶರಣು ಪೂಜಾರಿ ದೊಡ್ಡಮನಿ ಹಾಗೂ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಬಸನಗೌಡ ಮಾರಡಗಿ ಪಂಚಾಯತ್ ಕಾರ್ಯದರ್ಶಿಗಳು ಸದಾನಂದ ಪಾಟೀಲ್ ತಾಂತ್ರಿಕ ಸಹಾಯಕರು ಎಲ್ಲಪ್ಪ ಸರ್ ಮತ್ತು ಯಡ್ರಾಮಿ ತಾಲೂಕ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಲಾಲ್ ಪಟೇಲ್ ಯರಗಲ್ ಹಾಗೂ ಯಡ್ರಾಮಿ ತಾಲೂಕ ಬಿಜೆಪಿ ಪಕ್ಷದ ಯುವ ಮುಖಂಡರು ಸೈಬಣ್ಣ ಅಣಬೀ ಮತ್ತು ಶ್ರೀಶೈಲ್ ಮ್ಯಾಗೇರಿ ಯಮನಪ್ಪ ಬಿಳವಾರ್ ಬಾಗಪ್ಪ ತಳಗೇರಿ ಭೀಮಣ್ಣ ಮಾಸ್ಟರ್ ಭಜನಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ