ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರಿನ ದಾಹವನ್ನು ತೀರಿಸುವ ಮೂಲಕ ಎಪ್ರಿಲ್ ಕೂಲ್ ಆಚರಣೆ ಮಾಡಲು ಮುಂದಾಗಿ:ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತ ಅಮರೇಗೌಡ ಮಲ್ಲಾಪೂರ

ಬೇಸಿಗೆಯಿಂದ ಭೂಮಿಯ ಮೇಲೆ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತಾ ಇದೆ.ಇದರಿಂದ ಪ್ರಾಣಿ ಪಕ್ಷಿಗಳು ನೀರಿನ ದಾಹವನ್ನು ತೀರಿಸಿಕೊಳ್ಳಲಾಗದೆ ಎಲ್ಲೆಂದರಲ್ಲಿ ಸಾವನ್ನೊಪ್ಪುತ್ತಿವೆ.ಇಂತಹ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ ಮಲ್ಲಾಪೂರ ಅವರು ಶ್ರೀಶೈಲಕ್ಕೆ ಪಾದಯಾತ್ರೆಗೆ ಹೋದ ಸಂದರ್ಭದಲ್ಲಿ ಮಂಗನಿಗೆ ತುಂಬಾ ಬಾಯಾರಿಕೆಯಾಗಿರುವುದನ್ನು ಕಂಡು ತಮ್ಮ ನೀರಿನ ಬಾಟಲಿಯಲ್ಲಿನ ನೀರನ್ನು ಮಂಗನಿಗೆ ನೀಡಿ ನೀರುಣಿಸಿದರು.ದಯವಿಟ್ಟು ಪ್ರಾಣಿ ಪಕ್ಷಿಗಳಿಗೆ ನಿಮ್ಮ ಹತ್ತಿರದ ಅರಣ್ಯ ಪ್ರದೇಶದಲ್ಲಿ,ಮನೆಯ ಹಿತ್ತಲಿನ ತೋಟಗಳಲ್ಲಿ,ಮನೆಯ ಮೇಲ್ಚಾವಣಿಯಲ್ಲಿ,ಹತ್ತಿರದ ಗಿಡಮರಗಳಿಗೆ ಪ್ಲಾಸ್ಟಿಕ್ ಬುಟ್ಟಿಗಳು ಅಥವಾ ಮಣ್ಣಿನ ಮಡಿಕೆಗಳಲ್ಲಿ ಕಾಳು ಮತ್ತು ನೀರು ಹಾಕಿ ಪ್ರಾಣಿ ಪಕ್ಷಿಗಳ ಸಂಕುಲ ಉಳಿವಿಗೆ ಸಹಕಾರ ನೀಡಲು ಮುಂದಾಗಬೇಕು ಎಪ್ರಿಲ್ ಫೂಲ್ ಮಾಡುವ ಬದಲಿಗೆ ಪ್ರಾಣಿ ಪಕ್ಷಿಗಳಿಗೆ ನೀರಿನ ದಾಹವನ್ನು ತೀರಿಸುವ ಮೂಲಕ ಎಪ್ರಿಲ್ ಕೂಲ್ ಆಚರಣೆ ಮಾಡಲು ಮುಂದಾಗಬೇಕು ಎಂದು ಪರಿಸರ ಪ್ರೇಮಿ,ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕರಾದ ಅಮರೇಗೌಡ ಮಲ್ಲಾಪೂರ ಮನವಿ ಮಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ