ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎ ಆರ್ ಎಂ ಪಿಯು ಕಾಲೇಜು ವಾಣಿಜ್ಯ ವಿಭಾಗ 100% ಫಲಿತಾಂಶ

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸತತ ನಾಲ್ಕು ವರ್ಷಗಳಿಂದ ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ನೀಡುತ್ತಿರುವ ಶಾಲೆಯ ವಿದ್ಯಾರ್ಥಿಗಳಿಂದ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದೇವೆ ಎಂದು ಪ್ರಾಂಶುಪಾಲ ಡಾಕ್ಟರ್ ಕೆ ಮೂರ್ತಿ ಸಾಮ್ರಾಟ್ ತಿಳಿಸಿದರು ನಗರದ ಎ ಆರ್ ಎಂ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಕುರಿತು ಮಾತನಾಡಿದರು2024ನೇ ಸಾಲಿನಲ್ಲಿ ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ಪಡೆದು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಹರ್ಷಿತಾ ಆರ್ 600 ಕ್ಕೆ 582 ಅಂಕಗಳನ್ನು ಪಡೆದು 97% ಗಳಿಸಿದ್ದಾರೆ ಇನ್ನೂ ದ್ವಿತೀಯ ಸ್ಥಾನ ಸಂಧ್ಯಾ ಪಡೆದುಕೊಂಡು 600 ಕ್ಕೆ 577ಅಂಕ ಪಡೆದು 96% ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದರು.ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಒಟ್ಟು 93 ವಿದ್ಯಾರ್ಥಿಗಳು ಇದ್ದು 93 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ100% ಫಲಿತಾಂಶ ಪಡೆದರೆ ಕಲಾ ವಿಭಾಗದಲ್ಲಿ 25 ವಿದ್ಯಾರ್ಥಿಗಳಿದ್ದು ,ಅದರಲ್ಲಿ 23 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 98% ಪಡೆದಿರುತ್ತಾರೆ ಒಟ್ಟಾರೆಯಾಗಿ 40 ಅತ್ಯುನ್ನತ 64 ಪ್ರಥಮ ಶ್ರೇಣಿ ಹಾಗೂ 7 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಕೀರ್ತಿ ತಂದಿದ್ದ ಇವರಿಗೆ ಪ್ರಾಂಶುಪಾಲರು ಹಾರೈಸಿದರು.

ವರದಿ ಗಗನ್ ಸಾಮ್ರಾಟ್ ಶಿಡ್ಲಘಟ್ಟ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ