ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾರ್ವಜನಿಕರ ಉಪಯೋಗಕ್ಕೆ ಬಾರದ ತುರ್ತು ಸೇವೆ ವಾಹನ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ರಾಮಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು ಒಂದು ವಾರದಿಂದ ತುರ್ತು ವಾಹನದ ಎರಡು ಚಕ್ರಗಳು ಪಂಚರ್ ಆಗಿ ನಿಂತಿದೆ ಸಾರ್ವಜನಿಕರಿಗೆ ಇದರಿಂದ ಯಾವುದೇ ತರಹದ ಉಪಯೋಗ ಆಗುತ್ತಿಲ್ಲ ರಾಮಾಪುರ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕ ಹಾಗೂ ಬಡ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ತುರ್ತು ಪರಿಸ್ಥಿತಿಯಲ್ಲಿ ಏನಾದರೂ ಅಪಘಾತಗಳಾಗಿ ಗಾಯಗಳಾದಾಗ ಅಥವಾ ತುರ್ತು ಪರಿಸ್ಥಿತಿ ಉಂಟಾದಾಗ ಆಂಬುಲೆನ್ಸ್ ಅವಶ್ಯಕತೆ ಇದೆ ಆದರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ತರಹ ಚಕ್ರಗಳೆಲ್ಲಾ ಪಂಚರ್ ಆಗಿ ಆಂಬುಲೆನ್ಸ್ ನಿಂತಿರುವುದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗಿದೆ.ಆದ್ದರಿಂದ ಮೇಲಾಧಿಕಾರಿಗಳು ಆದಷ್ಟು ಬೇಗ ಎಚ್ಚೆತ್ತುಕೊಂಡು ಆಂಬುಲೆನ್ಸ್ ಅನ್ನು ಸರಿಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುವಂತೆ ಮಾಡಬೇಕೆಂದು ರಾಮಾಪುರ ಗ್ರಾಮದ ಜನತೆ ಹಾಗೂ ದಲಿತ ಸಂಘರ್ಷ ಸಮಿತಿಯ ಹನೂರು ಘಟಕ ಸಂಚಾಲಕರಾದ ಮಾರಿಯಪ್ಪ ಅವರು ಇದಕ್ಕೆ ಸಂಬಂಧ ಪಟ್ಟವರು ಆದಷ್ಟು ಬೇಗ ವಾಹನ ಸರಿಪಡಿಸಬೇಕು. ಕೇಳಿಕೊಂಡಿದ್ದಾರೆ.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ