ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೈಸೂರು ಲೋಕಸಭಾ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಒಡೆಯರ್ ಅವರಿಂದ ಮತಯಾಚನೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಬಿಜೆಪಿ ಮತ್ತು ಜಾತ್ಯಾತೀತ ಜನತಾದಳದ ಮೈತ್ರಿ ಅಭ್ಯರ್ಥಿಯಾದ ಯದುವೀರ್ ಕೃಷ್ಣದತ್ತ ಒಡೆಯರ್ ರವರು ಪಿರಿಯಾಪಟ್ಟಣ ತಾಲೂಕಿನ ವಿವಿಧ ಗ್ರಾಮದಲ್ಲಿ ಮತಯಾಚನೆ ಮಾಡಿ ಮಾತನಾಡುತ್ತಾ “ಭಾರತ ದೇಶ ಸುಭದ್ರವಾಗಿರಲು ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿಯಾಗಿ ಮಾಡಲು ಬಿಜೆಪಿ ಮತ್ತು ಜಾತ್ಯಾತೀತ ಜನತಾದಳದ ಮೈತ್ರಿ ಅಭ್ಯರ್ಥಿಯಾದ ನಾನು ಈ ಗ್ರಾಮದಲ್ಲಿ ಮತ ಕೇಳಲು ಬಂದಿದ್ದು ನಿಮ್ಮೆಲ್ಲರ ಆಶೀರ್ವಾದ ಲೋಕಸಭಾ ಚುನಾವಣೆಯಲ್ಲಿ ನನ್ನ ಗುರುತಾದ ಕಮಲದ ಗುರುತಿಗೆ ಮತ ಹಾಕುವುದರ ಮೂಲಕ ಜಯಶೀಲರನ್ನಾಗಿ ಮಾಡಬೇಕು ಮಾಡಿದರೆ ಮೈಸೂರು ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಮತ್ತು ಈ ಭಾಗದಲ್ಲಿ ತಂಬಾಕು ಹೆಚ್ಚಾಗಿ ಬೆಳೆಯುವ ರೈತರ ಕಷ್ಟಕ್ಕೆ ನಾನು ಸ್ಪಂದಿಸುತ್ತೇನೆ”ಎಂದು ತಿಳಿಸಿದರು.
ನನ್ನ ಮೇಲೆ ಇಲ್ಲಸಲ್ಲದ ಅಪವಾದವನ್ನು ಕಾಂಗ್ರೆಸ್ ಅಭ್ಯರ್ಥಿಗಳು ನಡೆಸುತ್ತಿದ್ದು ನಾನು ರಾಜನಾದರೂ ಸಹ ಸಾಮಾನ್ಯ ಜನರ ಕೈಗೆ ಸಿಕ್ಕುತ್ತೇನೆ ಅವರ ಅಪವಾದಕ್ಕೆ ದೂರವಾಗುತ್ತೇನೆ ಅದರಿಂದ ನನ್ನನ್ನು ಗೆಲ್ಲಿಸಿ ಎಂದು ಕೇಳಿಕೊಂಡರು ಇದೇ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಮಾದೇವ ಅವರು,ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷರಾದ ಅಣ್ಣಯ್ಯ ಶೆಟ್ಟಿ ರವರು,ಮಾಜಿ ಶಾಸಕರಾದ ಹೆಚ್ ಸಿ ಬಸವರಾಜ್ ರವರು,ತಾಲೂಕು ಬಿಜೆಪಿ ಘಟಕದ ಅಧ್ಯಕ್ಷರಾದ ರಾಜೇಂದ್ರ ಅವರು,ದೇವರಾಜ್ ಅರಸು ರವರ ಮೊಮ್ಮಗ ಮಂಜುನಾಥ್ ಅರಸರವರು,ಬಿಜೆಪಿ ಮುಖಂಡರಾದ ಆರ್ ಟಿ ಸತೀಶ್ ರವರು, ರಾಜೇಗೌಡರು ಎಚ್ ಎ ರಾಮಚಂದ್ರರವರು,ಎಚ್ ಡಿ ಶ್ರೀನಿವಾಸ್ ಹೆಚ್ಆರ್ ದೀಪು ರವರು,ಗ್ರಾಮ ಪಂಚಾಯತಿ ಸದಸ್ಯರು,ಯುವಕರು,ಮಹಿಳೆಯರು ಹಾಗೂ ಹಂಡಿತವಳ್ಳಿ ಗ್ರಾಮಸ್ಥರು ಸಂದರ್ಭದಲ್ಲಿ ಹಾಜರಿದ್ದರು.

ವರದಿ-ಹೆಚ್.ಆರ್.ಶಂಕರ್,ಹಂಡಿತವಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ