ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

ಕಲಬುರಗಿ:ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆ ಅತ್ಯಂತ ಖಂಡನೀಯ,ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಮಹಿಳೆಯರ ಮೇಲೆ ದೌರ್ಜನ್ಯ,ಶೋಷಣೆ,ಕೊಲೆಗಳು ದಿನೇ ದಿನೇ ಹೆಚ್ಚುತ್ತಿದ್ದು ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ,ರಕ್ಷಣೆ ಇಲ್ಲದೆ ಇರುವುದು ಈ ಘಟನೆಗಳಿಗೆ ಕಾರಣವಾಗಿವೆ.ಹುಬ್ಬಳ್ಳಿ ವಿದ್ಯಾನಗರದ ಕೆಎಲ್ಇಯ ಅಡ್ಡಿಯಲ್ಲಿ ಬರುವ ಕರ್ನಾಟಕ ಲಿಂಗಾಯತ ಶಿಕ್ಷಣ ತಾಂತ್ರಿಕ ವಿಶ್ವವಿದ್ಯಾನಿಲಯ (ಬಿವಿಬಿ) ಆವರಣದಲ್ಲಿ ಗುರುವಾರ ರಂದು ಎಂಸಿಎ ಮೊದಲ ವರ್ಷದಲ್ಲಿ ಓದುತ್ತಿದ್ದ ನೇಹಾ ಹಿರೇಮಠ (24) ಎಂಬ ವಿದ್ಯಾರ್ಥಿನಿಯನ್ನು ಹಾಡಹಗಲೇ ತನ್ನ ಹಳೆಯ ಸಹಪಾಠಿ ಚಾಕುವಿನಿಂದ ಕೊಲೆಮಾಡಿ ಹತ್ಯೆಗೈದಿರುವುದು ಅತ್ಯಂತ ಖಂಡನೀಯ ಎಂದರು.ಸೂಕ್ತ ತನಿಖೆ ನಡೆಸಿ,ತಪ್ಪಿತಸ್ಥ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು.
ಈ ಪ್ರಕರಣಗಳು ರಾಜ್ಯಾದ್ಯಂತ ಪ್ರತಿ ದಿನವೂ ನಡೆಯುತ್ತಿದ್ದು ಸರ್ಕಾರ ಇವುಗಳ ಬಗ್ಗೆ ಗಮನ ನೀಡದೆ ಇರುವುದು ಈ ರೀತಿಯ ಘಟನೆಗಳು ಹೆಚ್ಚಾಗಿವೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಆದರೆ ಇದನ್ನು ರಾಜ್ಯ ಸರ್ಕಾರ ಜಾರಿ ಮಾಡಿಲ್ಲ ತಕ್ಷಣ ಇದನ್ನು ರಚನೆ ಮಾಡಬೇಕು.ಇಂತಹ ಆರೋಪಿಗಳಿಗೆ ಕಾನೂನು ಕಠಿಣ ಶಿಕ್ಷೆ ವಿಧಿಸಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ವಿದ್ಯಾರ್ಥಿನಿಯರ,ಮಹಿಳೆಯರ ರಕ್ಷಣೆ ಹಾಗೂ ಭದ್ರತೆಗಾಗಿ ಮಹಿಳಾ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು.ಒಂದು ವೇಳೆ ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸದಿದ್ದರೆ ವಿದ್ಯಾರ್ಥಿಗಳನ್ನು ಬಿದಿಗಿಳಿಸಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ