ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಶ್ವ ಪುಸ್ತಕ ಹಾಗೂ ವಿಲಿಯಂ ಶೇಕ್ಸ್‌ಪಿಯರ್ ದಿನಾಚರಣೆಯ ಉದ್ಘಾಟನೆ

ಗೌರಿಬಿದನೂರು ನ್ಯಾಷನಲ್ ಕಾಲೇಜಿನಲ್ಲಿ ಏರ್ಪಡಿಸಲಾದ ವಿಶ್ವ ಪುಸ್ತಕ ಹಾಗೂ ವಿಲಿಯಂ ಶೇಕ್ಸ್‌ಪಿಯರ್ ದಿನಾಚರಣೆಯ ಸಭೆಯಲ್ಲಿ
ಆಧುನಿಕ ಬದುಕಿನ ಒತ್ತಡದ ಜೀವನದಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗುತ್ತಿದೆ ಎಂದು ಪ್ರಾಂಶುಪಾಲೆ ಡಾ.ಗಾಯತ್ರಿ ಅಭಿಪ್ರಾಯಪಟ್ಟರು.
ನಗರದ ಎಇಎಸ್ ನ್ಯಾಷನಲ್ ಕಾಲೇಜಿನಲ್ಲಿ ಗ್ರಂಥಾಲಯ ವಿಭಾಗದಿಂದ ಏರ್ಪಡಿಸಲಾಗಿದ್ದ ವಿಶ್ವ ಪುಸ್ತಕ ದಿನಾಚರಣೆ ಹಾಗೂ ವಿಲಿಯಂ ಷೇಕ್ಸಪೀಯರ್ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡುತ್ತಾ ಪುಸ್ತಕ ಅತ್ಯತ್ತಮ ಗೆಳೆಯ ಇದ್ದಂತೆ ಪುಸ್ತಕ ಓದುವುದರಿಂದ ವಿಶ್ವ ಸುತ್ತಿದ ಅನುಭವವಾಗುತ್ತದೆ ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಗ್ರಂಥಪಾಲಕ ಟಿ.ಎನ್.ಜಯರಾಮ ರೆಡ್ಡಿ ಮಾತನಾಡಿ ಪುಸ್ತಕಗಳು ಮಾನವ ಸಂಗಾತಿಗಳಾಗಿವೆ ಪುಸ್ತಕಗಳು ಗತ ವೈಭವದ ಸಾಕ್ಷಿಯಾಗಿ ಮತ್ತು ಮುಂದಿನ ಪೀಳಿಗೆಗೆ ಜ್ಞಾನ ರವಾನೆ ಮತ್ತು ಬದುಕಿನ ಭವಿಷ್ಯವನ್ನು ರೂಪಿಸುತ್ತದೆ ಗ್ರಂಥವಿಲ್ಲದ ಕೋಣೆ ಆತ್ಮವಿಲ್ಲದ ದೇಹದಂತೆ ಪ್ರತಿಯೊಬ್ಬ ವಿದ್ಯಾರ್ಥಿಯು ಪ್ರತಿಯೊಬ್ಬ ಓದುಗ ತನ್ನದೇ ಆದ ಪುಟ್ಟ ಗ್ರಂಥಾಲಯ ಮತ್ತು ತನ್ನದೇ ಆದ ಪುಸ್ತಕ ಭಂಡಾರವನ್ನು ತಾವಿರುವ ಸ್ಥಳದಲ್ಲಿ ರೂಪಿಸಿಕೊಳ್ಳಬೇಕೆಂದು ಹೇಳಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಟಿ.ಜಯರಾಮ್ ಮಾತನಾಡಿ ವಿದ್ಯಾರ್ಥಿಗಳು ಪುಸ್ತಕಗಳನ್ನು ಹಾಗೂ ದಿನ ಪತ್ರಿಕೆಗಳನ್ನು ಓದುವುದರಿಂದ ಹೆಚ್ಚು ಜ್ಞಾನ ಸಂಪಾದನೆ ಪಡೆಯಬಹುದು ಎಂದರು.
ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಟಿ.ನಂಜುಂಡಪ್ಪ ಮಾತನಾಡಿ ಶ್ರೇಷ್ಠ ಪುಸ್ತಕಗಳನ್ನು ಅಭ್ಯಾಸ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಾಣಗೊಳ್ಳಲು ಸಹಕಾರಿಯಾಗಲಿದೆ ಎಂದರು.
ಪ್ರಾಧ್ಯಾಪಕರಾದ ರಾಮಾಂಜಿನಮ್ಮ,ಡಾ.ಶೈಲಜಾ ಸಪ್ತ ಗಿರಿ,ಡಾ.ಗುಣರಂಜನಿ,ಪ್ರೊ.ವಿಜಯ್ ಕುಮಾರ್ ಮದ್ದಿಲೇಟಿ,ಗ್ರಂಥಾಲಯದ ಸಿಬ್ಬಂದಿ ಶ್ರೀನಾಥರೆಡ್ಡಿ,ಗಂಗರಾಜು,ರಾಜು ಮತಿತ್ತರರು ಇದ್ದರು.

ವರದಿ-ತುಳಸಿ ನಾಯ್ಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ