ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷರಾಗಿ ಇರ್ಷಾದ್ ಅಕ್ಬರ್ ಸಾಬ್ ಮೋಮಿನ್ ನೇಮಕ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತೇರದಾಳ ಮತ ಕ್ಷೇತ್ರದ ರಬಕವಿ ಬನಹಟ್ಟಿ ಮಹಾಲಿಂಗಪುರ್ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕ ಬ್ಲಾಕ್ ಅಧ್ಯಕ್ಷರಾಗಿ ಇರ್ಷಾದ್ ಅಕ್ಬರ್ ಸಾಬ್ ಮೋಮಿನ್ ನೇಮಕವಾಗಿದ್ದಾರೆ.
ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಲ್ಪ
ಸಂಖ್ಯಾತರ ಘಟಕದ ಅಧ್ಯಕ್ಷ ಶಫೀಕ್ ಎಂ ಬೇಪಾರಿ ಇವರು ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೊರ್ ಶಿಫಾರಸಿನ ಮೇರೆಗೆ ಹಾಗೂ ಕರ್ನಾಟಕ ಕೆಪಿಸಿಸಿ ವಿಭಾಗದ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾದ ಕೆ ಅಬ್ದುಲ್ ಜಬ್ಬಾರ್ ಅನಮೋದನೆಗೆ ಅನ್ವಯ ಇರ್ಷಾದ್ ಅಕ್ಬರ್ ಸಾಬ್ ಮೋಮಿನ್ ಇವರನ್ನು ಬ್ಲಾಕ್ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ರಬಕವಿ ಬನಹಟ್ಟಿ ನಗರದ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬ್ಲಾಕ್ ಅಧ್ಯಕ್ಷರಾಗಿ ನೇಮಕವಾದ ಇರ್ಷಾದ್ ಅಕ್ಬರ್ ಸಾಬ್ ಮೋಮಿನ್ ಅವರನ್ನು ಸನ್ಮಾನ ಮಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ವಿಭಾಗದ ಕಾರ್ಯದರ್ಶಿ ನಸೀಮ್ ಮೊಕಾಸಿ, ಬನಹಟ್ಟಿ ನಗರದ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಬುಡನ್ ಸಾಬ್ ಜಮಾದಾರ್,ನಗರದ ಖ್ಯಾತ ಉದ್ಯಮಿ ಯೂನುಸ್ ನಿಪ್ಪಾಣಿ,ರಂಜಾನ್ ಸಾಬ್ ಗೋರಿ,ಶಫೀಕ್ ಜಕಾತಿ,ಹುಜೆಪಾ ಮುಲ್ಲಾ,ಹಾಜಿ ಮಹೇಬೂಬ್ ಡಾಂಗೆ ಆಜಾದ್ ಮೇಸ್ತ್ರಿ,ಆರಿಫ್ ಅತ್ತಾರ್,ಸಲೀಂ ಬಾರಿಗಡ್ಡಿ,ಸಂತಿ,ಮುಸ್ತಕ್ ಶೇಕ್ ಹಾಗೂ ಇನ್ನೂ ಹಲವಾರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

ವರದಿ:ಮಹಿಬೂಬ್ ಎಂ ಬಾರಿಗಡ್ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ