ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ಕ್ಷೇತ್ರದ ಕಾಡಂಚಿನ ಗ್ರಾಮಗಳಿಗೆ ಮೂಲಸೌಕರ್ಯ ಇಲ್ಲ:ಇಂಡಿಗನತ್ತ ಗ್ರಾಮದಲ್ಲಿ ಮತ ಬಹಿಷ್ಕಾರ

ಚಾಮರಾಜನಗರ ಜಿಲ್ಲೆ ಹನೂರು
ಮಲಯ ಮಹೇದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಕಾಡಂಚಿನ ಗ್ರಾಮಗಳಾದ ಇಂಡಿಗನತ್ತ ಹಾಗೂ ಸುತ್ತ ಮುತ್ತಲಿನ ಇನ್ನಿತರ ಗ್ರಾಮಗಳ ಗ್ರಾಮಸ್ಥರು ಇಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.

ನಂತರ 5 ಗ್ರಾಮಗಳ ಗ್ರಾಮಸ್ಥರು ಮತಗಟ್ಟೆಯ ಮೇಲೆ ದಾಳಿ ನಡೆಸಿ ಮತಯಂತ್ರ,ಚುನಾವಣಾ ಪ್ರಕ್ರಿಯೆಗೆ ಬಳಸಿದ ಪೀಠೋಪಕರಣಗಳನ್ನು ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ 5 ಗ್ರಾಮಗಳ ಗ್ರಾಮಸ್ಥರು ಮೂಲಸೌಕರ್ಯಕ್ಕೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಚುನಾವಣಾ ಅಧಿಕಾರಿಗಳು ಗ್ರಾಮಸ್ಥರನ್ನು ಮನವೊಲಿಕೆ ಮಾಡಿ ಮತಗಟ್ಟೆಗೆ ಕರೆತಂದಿದ್ದಾರೆ.ಈ ವೇಳೆ ಮತದಾನದಿಂದ ದೂರ ಉಳಿದಿದ್ದ ಇನ್ನೊಂದು ಗ್ರಾಮದ ಮತದಾರರು ಮತಗಟ್ಟೆ ಸುತ್ತ ನಿಂತಿದ್ದರು. ಅವರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ.
ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಪೊಲಿಸರು, ಸಿಬ್ಬಂದಿ ಮತ್ತು ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ ಮತಗಟ್ಟೆಗೆ ನುಗ್ಗಿ ಅಲ್ಲಿದ್ದ ಮತಯಂತ್ರ, ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದರಿಂದ ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಸದರಿ ಗ್ರಾಮಗಳಲ್ಲಿ ಈವರೆಗೆ ವಿದ್ಯುತ್,ನೀರು, ಸಾರಿಗೆ ಸೇರಿದಂತೆ ಯಾವುದೇ ಮೂಲಸೌಕರ್ಯಗಳು ಇಲ್ಲದೇ ಗ್ರಾಮಸ್ಥರು ಇಂದಿಗೂ ಕತ್ತಲೆಯಲ್ಲಿ ಕಾಲಕಳೆಯುತ್ತಿದ್ದಾರೆ.ಜನಪ್ರತಿನಿಧಿಗಳಾಗಲಿ, ಸರ್ಕಾರವಾಗಲಿ ಈ ಗ್ರಾಮಗಳ ಜನರ ಸಂಕಷ್ಟವನ್ನು ಆಲಿಸುತ್ತಿಲ್ಲ ಎಂದು ದೂರಿದರು ಇದರಿಂದ ಬೇಸತ್ತು ಚುನಾವಣೆ ಬಹಿಷ್ಕರಿಸಿದ್ದಾಗಿ ಗ್ರಾಮಸ್ಥರು ಆಕ್ರೋಶ ಗೂoಡು ಹೇಳಿಕೆ ನೀಡಿದ್ದರು ನೆನ್ನೆ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಬಹಿಷ್ಕಾರ ಮಾಡಿದ್ದರು ಸಹ ಅಧಿಕಾರಿಗಳು ಮತ ಹಾಕಲು ಜನರಿಗೆ ಮನ ಓಲೈಕೆ ಮಾಡಲು ಅಧಿಕಾರಿಗಳು ಮುಂದಾದರು ಇದರಿಂದ ಇನ್ನಷ್ಟು ಜನ ಆಕ್ರೋಶಕ್ಕೆ ಒಳಗಾಗಿ ಅಧಿಕಾರಿಗಳ ಮೇಲೆ ಸಹ ಹಲ್ಲೆ ಮಾಡಿದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ