ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಥದ ಗಾಲಿ ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವರಿಗೆ ಗಂಭೀರ ಗಾಯ

ಸಂಜೆ ನಡೆದ ಇಂಡಿ ತಾಲೂಕಿನ ಲಚ್ಯಾಣ ಸಿದ್ಧಲಿಂಗೇಶ್ವರ ಮಹಾರಥೋತ್ಸವದ ಸಂಧರ್ಭದಲ್ಲಿ ರಥದ ಗಾಲಿ ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿರುವ ದುರಂತ ಘಟನೆ ಜರುಗಿದೆ.

ರಥದ ಗಾಲಿಯಲ್ಲಿ ಬಿದ್ದು ಮೃತಪಟ್ಟವರು ಇಬ್ಬರು ಸ್ಥಳೀಯರಾಗಿದ್ದು ಸೋಮು ಮಾದು ಶಿಂಧೆ ಹಾಗೂ ಬಂಡು ಕಟಕದೋಡ ಎಂದು ತಿಳಿದು ಬಂದಿದೆ ಇನ್ನೊರ್ವ ಹೆಸರು ವಿಳಾಸ ಇನ್ನೂ ತಿಳಿದು ಬಂದಿಲ್ಲ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ ದುರ್ಘಟನೆ ನಡೆದಿರುವುದು ಸಹಸ್ರಾರು ಭಕ್ತರನ್ನು ದಿಗ್ಭ್ರಾಂತರನ್ನಾಗಿಸಿದೆ.

ಭಾನುವಾರ ಲಚ್ಯಾಣದ ಶ್ರೀಸಿದ್ದಲಿಂಗ ಮಹರಾಜರ ಜಾತ್ರೆಯ ಹಿನ್ನೆಲೆಯಲ್ಲಿ ಮಹಾರಥೋತ್ಸವಕ್ಕಾಗಿ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿದ್ದರು. ಜಾತ್ರೆಯಲ್ಲಿ ರಥ ಸಾಗುವ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿ ಮೃತಪಟ್ಟ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತೀವ್ರವಾಗಿ ಗಾಯಗೊಂಡ ಓರ್ವ ವ್ಯಕ್ತಿಯನ್ನು ವಿಜಯಪುರದ ಸರ್ಕಾರಿ ಜಿಲ್ಲಾ ಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿಯುತ್ತಲೇ ಇಂಡಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಬೀಡು ಬಿಟ್ಟಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ