ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾರ್ವಜನಿಕರಿಗೆ ಆರೋಗ್ಯಕರವಾದ ಪಾನೀಯ ಸೇವನೆಗಳ ಬಗ್ಗೆ ಜಾಗೃತಿ ಮೂಡಿಸುವಆಯುಷ್ ಪಾನೀಯ ಪರಿಚಯ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಚಾಲನೆ

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದ ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ಜಿಲ್ಲಾಡಳಿತ ಭವನದಲ್ಲಿ ಬೇಸಿಗೆಯ ಸುಡು ಬಿಸಿಲಿನ ದಿನಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯಕರವಾದ ಪಾನೀಯ ಸೇವನೆಗಳ ಬಗ್ಗೆ ಜಾಗೃತಿ ಮೂಡಿಸುವ ಆಯುಷ್ ಪಾನೀಯ ಪರಿಚಯ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಸುಶೀಲ ಬಿ.ಅವರು ಚಾಲನೆ ನೀಡಿದರು.

ಆಯುಷ್ ಇಲಾಖೆಯಿಂದ ಚಿಂಚಾ ಪಾನಕ (ಹುಣಸೆ ಹಣ್ಣಿನ ಪಾನಕ) ಪರಿಚಯ

ಹುಣಸೆ ಹಣ್ಣು( ಹುಣಸೆ ಹಣ್ಣನ್ನು ಅಗತ್ಯ ಪ್ರಮಾಣದ ನೀರಿನಲ್ಲಿ ರಾತ್ರಿ ಇಡೀ ನೆನಸಿಡಬೇಕು),ಬೆಲ್ಲದ ಪುಡಿ, ಜೀರಿಗೆ ಪುಡಿ,ಕಾಳು ಮೆಣಸಿನ ಪುಡಿ,ಸೈಂದವ ಲವಣದಿಂದ ಚಿಂಚಾ ಪಾನಕ ತಯಾರಿಸಬಹುದು.ಈ ಪಾನಕದಿಂದ ಜೀರ್ಣಕ್ರಿಯೆ ಉತ್ತಮಗೊಳಿಸುತ್ತದೆ. ಮಲಬದ್ದತೆ ನಿವಾರಿಸಿ,ಶರೀರದ ದಾಹ ಹಾಗೂ ಬಾಯಾರಿಕೆಯನ್ನು ನೀಗಿಸುತ್ತದೆ ಎಂದು ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ ವಂದನಾ ಜೆ ಗಾಳಿ,ಡಾ ಪ್ರಕಾಶ್ ಹೆಚ್ ರಾಜಾಪುರ, ಡಾ ಪ್ರಮೋದ ಕುಲ್ಕರ್ಣಿ,ಡಾ ರಾಜೇಶ್ವರಿ ಗೋನಾಳಮಠ, ಡಾ ಸುನಂದಾ ಕುದರಿ,ಡಾ ರಮೇಶ್ ಸಜ್ಜನ್, ರವಿ ಕುಮಾರ ಪಾಟೀಲ್,ಡಾ ಎಂ ಬಿ ಪಾಟೀಲ್, ಡಾ ಮೀರಾ ಜೋಷಿ, ಸಂಗಮೇಶ್ ಕೆಂಭಾವಿ, ಡಾ ಪ್ರಮೀಳಾ ದೇವಿ ಸೇರಿದಂತೆ ಇನ್ನಿತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ: ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ