ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿಗ್ಗಾಂವಿಯಲ್ಲಿ ಮೊಳಗಿದ ಕೇಸರಿ ಪಡೆಯ ವಿಜಯದ ಪಾಂಚಜನ್ಯ

ಹಾವೇರಿ/ಶಿಗ್ಗಾಂವಿ:ಕೇಂದ್ರ ಸಚಿವ ಶ್ರೀ ಪ್ರಲ್ಲಾದ ಜೋಶಿ ಅವರು ಇಂದು ಚುನಾವಣಾ ಪ್ರಚಾರಾರ್ಥವಾಗಿ ಶಿಗ್ಗಾಂವಿ ನಗರದ ಸಂತೆ ಮೈದಾನದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಜನರಿಂದ ಜನರಿಗಾಗಿ ಜನರಿಗೋಸ್ಕರ ಸದಾ ದುಡಿಯುವ ಸರ್ಕಾರ.ದೇಶದ ಎಲ್ಲಾ ಜನರ ಕ್ಷೇಮಕ್ಕಾಗಿ,ಅಭಿವೃದ್ದಿಗಾಗಿ ಮತ್ತು ಸರ್ವತೋಮುಖ ಬೆಳವಣಿಗಾಗಿ ಸದಾ ಕೆಲಸ ಮಾಡುತ್ತಿದೆ.ಜಗತ್ತಿಗೆ ಭಾರತ ಕೇವಲ ಒಂದು ದೇಶವಾಗಿ ಉಳಿದಿಲ್ಲ. ಭಾರತವನ್ನು ಪ್ರಪಂಚ ತನ್ನ ಹಿರಿಯಣ್ಣನಾಗಿ ಸ್ವೀಕರಿಸಿದೆ.ಹೀಗಿರುವಾಗ ದೇಶದ ಪ್ರತಿ ನಾಗರಿಕನೂ ನರೇಂದ್ರ ಮೋದಿಯವರನ್ನು ಬೆಂಬಲಿಸಿ ಮತ್ತೊಮ್ಮೆ ಈ ದೇಶದ ಪ್ರಧಾನಿಯನ್ನಾಗಿ ಆರಿಸಬೇಕು. ಮುಂಬರುವ ಲೋಕಸಭಾ ಚುನಾವಣೆ ಕೇವಲ ಒಂದು ಚುನಾವಣೆಯಲ್ಲ ದೇಶದ ಸುವರ್ಣ ಯುಗಕ್ಕೆ ನಾಂದಿಯಾಗಲಿದೆ.ಹೀಗಾಗಿ ನಾವೆಲ್ಲರೂ ಎಚ್ಚೆತ್ತು ನರೇಂದ್ರ ಮೋದಿಯವರ ಸಮರ್ಥ ನಾಯಕತ್ವಕ್ಕೆ ನಮ್ಮ ಅಮೂಲ್ಯವಾದ ಮತ ನೀಡಿ ದೇಶದ ಐತಿಹಾಸಿಕ ಕ್ಷಣಗಳಿಗೆ ಮುನ್ನುಡಿ ಬರೆಯೋಣ ಎಂದು ನೆರೆದಿದ್ದ ಜನಸಾಗರದ ಬಳಿ ಬೆಂಬಲ ಕೋರಿದರು. ಈ ಸಂದರ್ಭದಲ್ಲಿ ಬಸನಗೌಡ ಯತ್ನಾಳ ಪಾಟೀಲ ಮಾತನಾಡಿ ನಮ್ಮ ದೇಶದಲ್ಲಿ ಹಿಂದುಗಳು ಬೆಳೆಯಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಬಿಜೆಪಿ ಗೆಲ್ಲಿಸಬೇಕು.

ಈ ಸಂದರ್ಭದಲ್ಲಿ ವಿಧಾನಸಭಾ ವಿಪಕ್ಷ ನಾಯಕ ಆರ್.ಅಶೋಕ್,ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌,ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಳವಿಕಾ ಅವಿನಾಶ್ ಪ್ರಮುಖ ಶಿವಾನಂದ ಮ್ಯಾಗೇರಿ,ಶ್ರೀಕಾಂತ್ ದುಂಡಿಗೌಡ‌ರ್,ಶಶಿಧ‌ರ್ ಯಲಿಗಾರ,ತಿಪ್ಪಣ್ಣ ಸಾತಣ್ಣವರ,
ಪ್ರಸಾದ್ ಸುರಗಿಮಠ,ರವಿ ಕುಡೊಕ್ಕಲಿಗಾರ್,
ಬಸವರಾಜ್‌ ನಾರಾಯಣಪುರ,ಗಂಗಾಧರ್ ಬಾಣದ ಹಾಗೂ ಪಕ್ಷದ ಪ್ರಮುಖರುಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿಗಾರ ಮಂಜುನಾಥ ಪಾಟೀಲ ‌‌

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ