ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗಾಯನದ ಮೂಲಕ ಮತದಾನ ಜಾಗೃತಿ ಮೂಡಿಸಿದ ಚಿತ್ರಕಲಾ ಶಿಕ್ಷಕ

ಬಾಗಲಕೋಟೆ ಜಿಲ್ಲೆಯ ಇಳಕಲ್ ಸಮೀಪದ ಹಿರೇಸಿಂಗನಗುತ್ತಿ ಗ್ರಾಮದ ಕವಿ ಕಲಾವಿದ ಚಿತ್ರಕಲಾ ಶಿಕ್ಷಕ ಬಿ ತಿರುಪತಿ ಶಿವನಗುತ್ತಿ ಅವರು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಸ್ವತಃ ರಚಿಸಿ ಹಾಡಿದ ಮತದಾನ ಜಾಗೃತಿ ಗೀತೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಮತದಾನ ನಮ್ಮ ಹಕ್ಕು ಮರಿಲಾರದೇ ಮತವ ಹಾಕು, ಮತದಾರ…
ಪ್ರಜಾಪ್ರಭುತ್ವಕೆ ನೀ ಸೂತ್ರಧಾರ,
ಮತವನ್ನು ಹಾಕುವ ಮತದಾರನೇ ದೇಶದ ಏಳ್ಗೆಗೆ ಆಧಾರವು ಹಾಗೂ ಮರೆಯದೆ ಮತವನು ಹಾಕೋಣ, ಸರಿಯಾದ ವ್ಯಕ್ತಿಗಳ ಆರಿಸೋಣ ಎನ್ನುವ ಗೀತೆಗಳ ಮುಖಾಂತರ ಮತದಾನದ ಮಹತ್ವ,ಮತದಾರರ ಜವಾಬ್ದಾರಿ,ಮತದಾನದ ಹಕ್ಕು ಸಿಗಲು ನಡೆದ ಹೋರಾಟ ಮತ್ತು ಸಂವಿಧಾನದ ಆಶಯಗಳನ್ನು ಮತದಾರರಿಗೆ ತಿಳಿಸಿಕೊಟ್ಟಿದ್ದಾರೆ.
ಕಳೆದ ಜನೆವರಿ 26 ರಂದು ಸಂವಿಧಾನ ಜಾರಿಗೆ ಬಂದ ಪ್ರಜಾಪ್ರಭುತ್ವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಬೃಹತ್ ಗಾತ್ರದ ಸಂವಿಧಾನ ಗ್ರಂಥದ ಮಾದರಿಯನ್ನು ತಯಾರಿಸಿ ಭವ್ಯ ಮೆರವಣಿಗೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.ಸದಾ ಒಂದಿಲ್ಲೊಂದು ಹೊಸತನ ಹುಟ್ಟು ಹಾಕಿ ವಿಶಿಷ್ಟ ರೀತಿಯಲ್ಲಿ ಸಾಧನೆ ಮಾಡುತ್ತಿರುವ ಶಿಕ್ಷಕನ ಈ ಸಾಧನೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ