ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗ್ಯಾರಂಟಿ ಯೋಜನೆಗಳಿಂದ ಜನರಿಗೆ ನೆಮ್ಮದಿ:ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರು

ವಿಜಯಪುರ:ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಜನರನ್ನು ಸಂಕಷ್ಟಗಳಿಂದ ಪಾರು ಮಾಡಿ ನೆಮ್ಮದಿಯಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಾಯ ಮಾಡಿವೆ ಇದೇ ರೀತಿಯಲ್ಲಿ ಕಾಂಗ್ರೆಸ್ ಲೋಕಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ದೇಶದ ಜನರ ಅರ್ಥಿಕತೆಯನ್ನು ಸುಧಾರಿಸಲಿವೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು ತಾಲೂಕಿನ ನಾದಕೆಡಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣೆ ಅಭ್ಯರ್ಥಿ ರಾಜು ಆಲಗೂರ ರವರ ಪ್ರಚಾರ ಸಭೆಯಲ್ಲಿ ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡಿ ಯುವಕರಿಗೆ ನೌಕರಿ ಕೊಡುವುದಾಗಿ ಹೇಳಿದರು.ಇಂದು ದೇಶದಲ್ಲಿ ೪೦ ಲಕ್ಷ ಸರಕಾರಿ ನೌಕರರ ಹುದ್ದೆ ಖಾಲಿ ಇವೆ ಎಂದರು. ಕಾಂಗ್ರೆಸ್ ಸರಕಾರ ಬಡವರ ಸರಕಾರ,ಹಾಗಾಗಿ ಜನರಿಗಾಗಿ ಪಂಚ ಗ್ಯಾರಂಟಿ ೮ ತಿಂಗಳಲ್ಲಿ ಜಾರಿ ಮಾಡಿ ಎಲ್ಲರಿಗೂ ಅನುಕೂಲ ಮಾಡಿ ಕೊಟ್ಟಿದೆ ಎಂದರು.ಗ್ರಾ.ಪಂ ಅಧ್ಯಕ್ಷ ಸಿದ್ದರಾಯ ಐರೋಡಗಿ ಮಾತನಾಡಿ ದೇಶದ ಯಾವುದೇ ರಾಜ್ಯದಲ್ಲಿ ಕೊಡಲಾರದಷ್ಟು ಸೌಲಭ್ಯಗಳನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ನೀಡಿದೆ.ಧರ್ಮದ ಹೆಸರಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ ಎಂದರು.ರುದ್ರಗೌಡ ಅಲಗೊಂಡ, ಸೋಮಶೇಖರ ಮ್ಯಾಕೇರಿ,ಬಸವರಾಜ ಅವುಜಿ, ದೀಲಿಪ ಪತ್ತಾರ,ಶರಣು ತಾವರಖೇಡ,ಪೈಗಂಬರ ದೇಸಾಯಿ,ವಿ.ಕೆ ಅಂಬಾರಿ,ಚಂದು ಸಾಹುಕಾರ ಸೊನ್ನ, ಮಂಜು ಶಹಾಬಾದಿ,ಪ್ರಶಾಂತ ಆಲಗೊಂಡ, ಗೌಡಪ್ಪಗೌಡ ಪಾಟೀಲ,ಮಂಜುನಾಥ ಕಾಮಗೊಂಡ, ಶೆಟ್ಟೆಪ್ಪ ಗುಡಿಮನಿ,ಶಂಗು ದಂಡಾವತೆ,ದಿಲೀಪ ಸೋರೆಗಾಂವ,ಸಂಗಣ್ಣಾ ಈರಾಬಟ್ಟಿ,ಪ್ರಶಾಂತ ಕಾಳೆ, ಜಾವೀದ ಮೋಮಿನ,ಭೀಮಣ್ಣಾ ಕೌಲಗಿ,ಇಲಿಯಾಸ ಬೋರಾಮಣಿ ಮತ್ತಿತರಿದ್ದರು.

ವರದಿ-ಮನೋಜ್ ನಿಂಬಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ