ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೀದರ್ ನ ಸಮೃದ್ಧಿ,ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಮತ ಚಲಾಯಿಸಿ:ಸಚಿವ ಈಶ್ವರ್ ಖಂಡ್ರೆ

ಬೀದರ ನಗರದ ಗವಾನ್ ಚೌಕ್ ನಲ್ಲಿ ಬೀದರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ ಈಶ್ವರ ಖಂಡ್ರೆ ಅವರ ಪರವಾಗಿ ಪ್ರಚಾರ ನಡೆಸಿ ಮತಯಾಚಿಸಿದರು.ಈ ಸಂದರ್ಭದಲ್ಲಿ ಬೀದರ್ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ರವರು ಮಾತನಾಡಿ,ಬದಲಾವಣೆ ಬಯಸುತ್ತಿರುವ ಬೀದರ್ ಮಹಾಜನತೆಗೆ ಭರವಸೆಯೇ ಕಾಂಗ್ರೆಸ್, ಅಭಿವೃದ್ಧಿಗಾಗಿ ಹಸ್ತದ ಗುರುತಿಗೆ ಮತ ಚಲಾಯಿಸಿ ಎಂದು ಮನವಿ ಮಾಡಿದರು ಹಾಗೂ ಜನರ ಒಲವು ಜನಪರ ಪಕ್ಷವಾದ ಕಾಂಗ್ರೆಸ್ ಪರವಾಗಿದೆ ಜನರ ಶ್ರೇಯೋಭಿವೃದ್ಧಿಗಾಗಿ ಕಾಂಗ್ರೆಸ್ ಜನಪರ ಯೋಜನೆಗಳನ್ನು ಘೋಷಿಸಿಕೊಂಡು ಬಂದಿದೆ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಬಂದಿದೆ ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ನುಡಿದಂತೆ ನಡೆದುಕೊಂಡಿದೆ ಬಿಜೆಪಿ ಹತ್ತು ವರ್ಷದಿಂದ ಸುಳ್ಳು ಹೇಳಿಕೊಂಡೇ ಆಡಳಿತ ನಡೆಸಿದೆ ಹೊರತು ಅಭಿವೃದ್ಧಿ ಮಾಡಿಲ್ಲ.ಅಚ್ಚೇ ದಿನ್ ಬರುತ್ತೆ ಅಂದ್ರು ಎಲ್ಲಿ ಬಂತು ಅಚ್ಚೇ ದಿನ್ ? ಬಡವರ ಜೇಬಿಗೆ ಕತ್ತರಿ ಹಾಕುತ್ತಲೇ ಬಂದಿದೆ.ನಮ್ಮ ಸರ್ಕಾರ ಜನರ ಶ್ರೇಯೋಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿದೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ಜನತೆ ನೆಮ್ಮದಿ ಜೀವನ ನಡೆಸುವಂತೆ ಮಾಡಿದೆ.ಮೇ 7ರಂದು ನಡೆಯಲಿರುವ ಬೀದರ ಲೋಕಸಭಾ ಚುನಾವಣೆಯಲ್ಲಿ ಸಾಗರ್ ಖಂಡ್ರೆ ಅವರ ಕ್ರಮ ಸಂಖ್ಯೆ 3, ಹಸ್ತದ ಗುರುತಿಗೆ ಮತ ಚಲಾಯಿಸಿ,ಅವರನ್ನು ಗೆಲ್ಲಿಸಿ ಬೀದರ್ ಅನ್ನು ಪ್ರಗತಿಯತ್ತ ಕೊಂಡೊಯ್ಯಿರಿ ಎಂದು ಮಾತನಾಡಿದ್ದರೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪಂಚ ನ್ಯಾಯಗಳನ್ನು ಜಾರಿಗೆ ತರಲಿದೆ ಎಂದು ಸಭೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಅರವಿಂದ ಅರಳಿ,ಸಚಿವರಾದ ರಹೀಮ್ ಖಾನ್, ಫಾತಿಮಾ ಜಿ,ಬಲ್ಜಿತ ಸಿಂಗ್,ಖಾದ್ರಿ ಸಾಬ್,ಅಮೃತ್ ಚಿಮಕೋಡ,ಸಂಜಯ್ ಜಾಗೀರ್ದಾರ್ ನಗರ ಸಭೆ ಪಾಲಿಕೆಯ ಸದಸ್ಯರಾದ ಯೂಸುಫ್ ಹಾಗೂ ಕಾಲೋನಿಯ ಮುಖಂಡರು ಉಪಸ್ಥಿತರಿದ್ದರು.

ವರದಿ:ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ