ಸಿಂಧನೂರು ತಾಲೂಕಿನ ಎಲೆಕೂಡ್ಲಿಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೋಗಿಲೆ(ಪಕ್ಷಿ)ಯೊಂದು ನೀರಿನ ದಾಹವನ್ನು ತೀರಿಸಿಕೊಳ್ಳಲು ನೀರನ್ನು ಹುಡುಕಿ ಹೊರಟಾಗ ಸಂಚರಿಸುವ ಬಸ್ ಗೆ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದು ಮೂರ್ಛೆ ಹೋಯಿತು.ಇದನ್ನು ಕಂಡ ಪರಿಸರ ಪ್ರೇಮಿಗಳು ಹಾಗೂ ವನಸಿರಿ ಫೌಂಡೇಶನ್ ಸದಸ್ಯರಾದ ಆನಂದ ಪತ್ತಾರ ಅವರು ಪಕ್ಷಿಯನ್ನು ಕೂಡಲೇ ವನಸಿರಿ ಫೌಂಡೇಶನ್ ಕಾರ್ಯಾಲಯಕ್ಕೆ ತಂದು ಸಂಸ್ಥೆಯ ಸಂಸ್ಥಾಪಕರಾದ ಅಮರೇಗೌಡ ಮಲ್ಲಾಪೂರ ಅವರಿಗೆ ಮಾಹಿತಿ ತಿಳಿಸಿ ಒಪ್ಪಿಸಿದರು ತಕ್ಷಣ ಅದನ್ನು ಪಶುಚಿಕಿತ್ಸಾಲಯಕ್ಕೆ ಹೋಗಿ ಔಷಧಿ ಕೊಡಿಸಿ ಅರಣ್ಯ ಇಲಾಖೆಯ ಅಧಿಕಾರಿ ಮುನಿಸ್ವಾಮಿಯವರಿಗೆ ಒಪ್ಪಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪರಿಸರ ರತ್ನ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕರಾದ ಅಮರೇಗೌಡ ಮಲ್ಲಾಪೂರ, ಅರಣ್ಯ ಇಲಾಖೆಯ ಅಧಿಕಾರಿ ಮುನಿಸ್ವಾಮಿ,ವನಸಿರಿ ಫೌಂಡೇಶನ್ ಸದಸ್ಯರಾದ ಆನಂದ ಪತ್ತಾರ ಹಾರಾಪೂರ,ಪಂಪಾಪತಿ ಪತ್ತಾರ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು,ಪಶುಚಿಕಿತ್ಸಾಲಯದ ಸಿಬ್ಬಂದಿಗಳು ವನಸಿರಿ ಫೌಂಡೇಶನ್ ಸದಸ್ಯರುಗಳು ಇದ್ದರು.




















