ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಟ್ಟಣದ ಮುಖ್ಯ ರಸ್ತೆ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ ಎಂ.ಆರ್.ಮಂಜುನಾಥ್

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ತಾತ್ಕಾಲಿಕವಾಗಿ ಸ್ಥಗಿತವಾಗಿರುವ ರಸ್ತೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತ ಗೊಳಿಸುವಂತೆ ಶಾಸಕ ಎಂ ಆರ್ ಮಂಜುನಾಥ್ ಕೆಶಿಪ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಉಳಿದಿರುವ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಸಿಎಫ್ ಅಧಿಕಾರಿಗಳಿಗೆ ಶಾಸಕರು ತಿಳಿಸಿದರು.ಪಟ್ಟಣದ ಮುಖ್ಯ ರಸ್ತೆ ಭರದಿಂದ ಸಾಗಿದ ರಸ್ತೆ ಕಾಮಗಾರಿ ಪಟ್ಟಣದ ನಡುವೆ ಹಾದು ಹೋಗುವ ಮುಖ್ಯ ರಸ್ತೆ  ಹೆದ್ದಾರಿ  ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ತಿಳಿಸಿದರು.
ರಸ್ತೆ ಕಾಮಗಾರಿ ಪ್ರಾರಂಭವಾಗದೆ ಇನ್ನೂ ಕೆಲವು ಕಡೆ ಕಟ್ಟಡ ತೆರವುಗೊಳಿಸುವ ಕಾರ್ಯ ಮಾಡಬೇಕಿದ್ದು ಪೂರ್ಣ ಪ್ರಮಾಣದಲ್ಲಿ ತೆರವುಗೊಳ್ಳುತ್ತಿದ್ದಂತೆ ರಸ್ತೆ ಕಾಮಗಾರಿ ನಡೆಸಲಾಗುವುದು.ಪಟ್ಟಣದ ಮುಖ್ಯ ರಸ್ತೆ ಕಾಮಗಾರಿ ನಡೆಯುತ್ತಿದ್ದು ರಸ್ತೆ ಬದಿ ಅಂಗಡಿ ಮಾಲಿಕರುಗಳಿಗೂ ಕೂಡ ಅಧಿಕಾರಿಗಳಿಗೆ ಉಳಿದಿರುವ ಅಭಿವೃದ್ಧಿ ಕಾಮಗಾರಿ  ಪೂರ್ಣಗೊಳಿಸಲು ಸಹಕರ ನೀಡಿ ಪಟ್ಟಣದ ಅಭಿವೃದ್ಧಿಗೆ ಸಹಕರಿಸಿ ಎಂದು ಹೇಳಿದರು.
ಕೆಸಿಎಫ್ ರಸ್ತೆ ಕಾಮಗಾರಿ ಪ್ರಾಜೆಕ್ಟ್ ಮ್ಯಾನೇಜರ್ ಮುತ್ತಣ್ಣ,ಮಹಾಂತೇಶ್,ಜೆಡಿಎಸ್ ಪಟ್ಟಣ ಪಂಚಾಯಿತಿ ಸದಸ್ಯರಾದ ಆನಂದ್ ಕುಮಾರ್, ಹಾಗೂ ಮುಖಂಡರುಗಳಾದ ಮಂಜೇಶ್ ಗೌಡ, ಗಿರೀಶ್ ,ಗೋಪಾಲ್ ನಾಯಕ,ಜಯರಾಮು,ಮಹಾದೇವ್,ಎಸ್,ಆರ್ ಮಹಾದೇವ್,ವೆಂಕಟೇಶ್,ಅಮೀನ್,ವೆಂಕಟೇಶ್ ಇನ್ನಿತರರು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ