ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹನೂರು ಶೈಕ್ಷಣಿಕ ವಲಯಕ್ಕೆ ಸೌಜನ್ಯ ಟಾಪರ್

ಹನೂರು:ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮವಾದ ಅಂಕಗಳಿಸುವ ಮೂಲಕ ಹನೂರು ಶೈಕ್ಷಣಿಕ ವಲಯಕ್ಕೆ ಮೊದಲ ಸ್ಥಾನ ಪಡೆದಿರುವ ಸೌಜನ್ಯ ಅವರಗೆ ಇಲಾಖೆಯ ವತಿಯಿಂದ ಅಭಿನಂದನೆಗಳು ಎಂದು ಹನೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಹೇಳಿದರು.
ತಾಲೂಕಿನ ಕಂಡಯ್ಯನ ಪಾಳ್ಯ ಗ್ರಾಮದ ಕುಮಾರಿ ಸೌಜನ್ಯ ಮನೆಗೆ ಭೇಟಿ ನೀಡಿ ಇಲಾಖೆಯ ವತಿಯಿಂದ ಸನ್ಮಾನಿಸಿ ಮಾತನಾಡಿ ಹನೂರು ಶೈಕ್ಷಣಿಕ ವಲಯ ಗುಡ್ಡಗಾಡು ಪ್ರದೇಶವಾಗಿದ್ದು ಗ್ರಾಮೀಣ ಭಾಗದ ಮಕ್ಕಳು ಉತ್ತಮವಾದ ಅಂಕ ಗಳಿಸುತ್ತಿದ್ದಾರೆ ಅಂತೆಯೇ ಕಂಡಯ್ಯನ ಪಾಳ್ಯ ಗ್ರಾಮದ ಕುಮಾರಿ ಸೌಜನ್ಯ ಪಟ್ಟಣದ ಶ್ರೀ ವಿವೇಕಾನಂದ ಪ್ರೌಢ ಶಾಲೆಯಲ್ಲಿ ಓದುವ ಮೂಲಕ 599 ಉತ್ತಮ ಅಂಕ ಗಳಿಸಿ ಶಾಲೆಗೆ ಊರಿಗೆ ಹಾಗೂ ಹನೂರು ಶೈಕ್ಷಣಿಕ ವಲಯಕ್ಕೆ ಹೆಸರು ತಂದಿದ್ದಾರೆ ಎಂದರು.
ಕುಮಾರಿ ಸೌಜನ್ಯ ಮಾತನಾಡಿ ನನ್ನ ಪರಿಶ್ರಮ ಹಾಗೂ ಶಿಕ್ಷಕರ ಸಹಕಾರದಿಂದ ಒಳ್ಳೆಯ ಅಂಕ ಪಡೆಯಲು ಸಾಧ್ಯವಾಗಿದೆ ಎಂದರು.
ಇದೆ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಮಹದೇವ್,ಶಿಕ್ಷಣ ಸಂಯೋಜಕ ಕಂದವೇಲು,ಕಿರಣ್ ಕುಮಾರ್, ಚಿನ್ನಪ್ಪಯ್ಯ ಹಾಗೂ ವಿವೇಕಾನಂದ ಕಾಲೇಜಿನ ಪ್ರಾoಶುಪಾಲರಾದ ಮಧು ಸುಧನ್ ಹಾಗೂ ಇನ್ನಿತರರು ಇದ್ದರು.
ಎಸ್ ಎಸ್ ಎಲ್ ಸಿ ಯಲ್ಲಿ ಹನೂರು ತಾಲೂಕು ಟಾಪರ್ ಸೌಜನ್ಯ ಅವರನ್ನು ಬಿ ಇ ಒ ಮಹೇಶ್ ಅಭಿನಂದಿಸಿದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ