ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ಜಾನಪದ ಪರಿಷತ್ತು ನೇತೃತ್ವದಲ್ಲಿ ಮೇ. ೨೮ ರಂದು ರಾಜ್ಯಮಟ್ಟದ ಒಂದು ದಿನದ ಅಧ್ಯಯನ ಶಿಬಿರ

ಶಿವಮೊಗ್ಗ:ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ಮತ್ತು ಕುವೆಂಪು ವಿ.ವಿ. ಕನ್ನಡ ಅಧ್ಯಾಪಕರ ವೇದಿಕೆ ಸಹಯೋಗದಲ್ಲಿ ಮೇ ೨೮ ರಂದು ಮಂಗಳವಾರ ಬೆಳಿಗ್ಗೆ ೧೦ ರಿಂದ ಸಂಜೆಯ ವರೆಗೆ ಜಾನಪದ ದಿಕ್ಕು-ದೆಸೆ ವಿಚಾರವಾಗಿ ಒಂದು ದಿನದ ರಾಜ್ಯ ಮಟ್ಟದ ಜಾನಪದ ಅಧ್ಯಯನ ಶಿಬಿರ ಏರ್ಪಡಿಸಲಾಗಿದೆ.
ಸಹ್ಯಾದ್ರಿ ವಿಜ್ಞಾನ ಕಾಲೇಜು ಆವರಣದಲ್ಲಿರುವ ಡಾ.ರಾಧಾಕೃಷ್ಣ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.ಕುವೆಂಪು ವಿ.ವಿ. ಕುಲಪತಿಗಳಾದ ಪ್ರೊ. ಶರತ್ ಅನಂತಮೂರ್ತಿ ಉದ್ಘಾಟಿಸಲಿದ್ದಾರೆ.ಹಂಪಿ ಕನ್ನಡ ವಿ.ವಿ.ವಿಶ್ರಾಂತ ಕುಲಪತಿಗಳು,ಕರ್ನಾಟಕ ಜಾನಪದ ಪರಿಷತ್ತು ರಾಜ್ಯ ಕಾರ್ಯಾಧ್ಯಕ್ಷರಾದ ಡಾ.ಹಿ.ಶಿ.ಬೋರಲಿಂಗಯ್ಯ,ಪ್ರೊ.ಎನ್.ರಾಜೇಶ್ವರಿ, ಪ್ರಿನ್ಸಿಪಾಲರು,ಸಹ್ಯಾದ್ರಿ ವಿಜ್ಞಾನ ಕಾಲೇಜು,ಡಾ. ಸಬಿತಾ ಬನ್ನಾಡಿ ಅಧ್ಯಕ್ಷರು,ಕನ್ನಡ ಅಧ್ಯಾಪಕರ ವೇದಿಕೆ ಅವರು ಭಾಗವಹಿಸಲಿದ್ದಾರೆ.
ಮೊದಲ ಗೋಷ್ಠಿಯಲ್ಲಿ ಮಂಗಳೂರಿನ ಡಾ.ವಿಶ್ವನಾಥ ಬದಿಕಾನೆ ಅವರು ಜಾನಪದ ಸ್ವರೂಪ ಮತ್ತು ಮಹತ್ವ ವಿಚಾರವಾಗಿ,ಬಳ್ಳಾರಿಯ ಡಾ.ಅರುಣ್ ಜೋಳದ ಕೂಡ್ಲಿಗಿ ಅವರು ಜಾನಪದ ಅಧ್ಯಯನದ ಸಾಧ್ಯತೆ ವಿಚಾರವಾಗಿ ಮಾತನಾಡಲಿದ್ದಾರೆ.ಡಾ.ಜಿ.ಆರ್.ಲವ ಸಮನ್ವಯ ಕಾರರಾಗಿರುತ್ತಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ